ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಕೆವೈಸಿ ನೋಂದಣಿ ಸಮಯ ವಿಸ್ತರಣೆ: ಸಚಿವ ಕೆ.ಗೋಪಾಲಯ್ಯ

Last Updated 29 ಫೆಬ್ರುವರಿ 2020, 13:11 IST
ಅಕ್ಷರ ಗಾತ್ರ

ಉಡುಪಿ: ಪಡಿತರ ಕೇಂದ್ರಗಳಲ್ಲಿ ಇಕೆವೈಸಿ ನೋಂದಣಿ ಸಮಯವನ್ನು ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಪಡಿತರ ವಿತರಣಾ ಕೇಂದ್ರಗಳು ಬೆಳಿಗ್ಗೆ 10ರಿಂದ 5ರವರೆಗೆ ತೆರೆಯುತ್ತಿದ್ದು, ಈ ಅವಧಿಯಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುತ್ತಿರುವುದರಿಂದ ಇಕೆವೈಸಿಗೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ.

2 ತಿಂಗಳ ಇಕೆವೈಸಿ ಅವಧಿಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯುವಂತೆ ಸೂಚನೆ ನೀಡಲಾಗಿದೆ. ಸೋಮವಾರದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.

ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆದಿದ್ದರೆ 2 ತಿಂಗಳೊಳಗೆ ವಾಪಸ್‌ ಮಾಡಬೇಕು. ಇಲ್ಲವಾದರೆ, ದಂಡದ ವಿಧಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದುವರೆಗೂ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹರು ಮರಳಿಸಿದ್ದಾರೆ. ₹ 96 ಲಕ್ಷಕ್ಕೂ ಹೆಚ್ಚು ದಂಡ ಪಾವತಿಸಿದ್ದಾರೆ. ಖುದ್ದು ಕಾರ್ಡ್ ಮರಳಿಸಿದರೆ ದಂಡವಿಲ್ಲ, ಸಿಕ್ಕಿಬಿದ್ದರೆ ಇದುವರೆಗೂ ಪಡೆದ ಪಡಿತರಕ್ಕೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT