<p><strong>ಉಡುಪಿ:</strong> ಪಡಿತರ ಕೇಂದ್ರಗಳಲ್ಲಿ ಇಕೆವೈಸಿ ನೋಂದಣಿ ಸಮಯವನ್ನು ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.</p>.<p>ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಪಡಿತರ ವಿತರಣಾ ಕೇಂದ್ರಗಳು ಬೆಳಿಗ್ಗೆ 10ರಿಂದ 5ರವರೆಗೆ ತೆರೆಯುತ್ತಿದ್ದು, ಈ ಅವಧಿಯಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುತ್ತಿರುವುದರಿಂದ ಇಕೆವೈಸಿಗೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ.</p>.<p>2 ತಿಂಗಳ ಇಕೆವೈಸಿ ಅವಧಿಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯುವಂತೆ ಸೂಚನೆ ನೀಡಲಾಗಿದೆ. ಸೋಮವಾರದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.</p>.<p>ಅಕ್ರಮವಾಗಿ ಬಿಪಿಎಲ್ ಕಾರ್ಡ್ಗಳನ್ನು ಪಡೆದಿದ್ದರೆ 2 ತಿಂಗಳೊಳಗೆ ವಾಪಸ್ ಮಾಡಬೇಕು. ಇಲ್ಲವಾದರೆ, ದಂಡದ ವಿಧಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದುವರೆಗೂ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಅನರ್ಹರು ಮರಳಿಸಿದ್ದಾರೆ. ₹ 96 ಲಕ್ಷಕ್ಕೂ ಹೆಚ್ಚು ದಂಡ ಪಾವತಿಸಿದ್ದಾರೆ. ಖುದ್ದು ಕಾರ್ಡ್ ಮರಳಿಸಿದರೆ ದಂಡವಿಲ್ಲ, ಸಿಕ್ಕಿಬಿದ್ದರೆ ಇದುವರೆಗೂ ಪಡೆದ ಪಡಿತರಕ್ಕೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪಡಿತರ ಕೇಂದ್ರಗಳಲ್ಲಿ ಇಕೆವೈಸಿ ನೋಂದಣಿ ಸಮಯವನ್ನು ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.</p>.<p>ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಪಡಿತರ ವಿತರಣಾ ಕೇಂದ್ರಗಳು ಬೆಳಿಗ್ಗೆ 10ರಿಂದ 5ರವರೆಗೆ ತೆರೆಯುತ್ತಿದ್ದು, ಈ ಅವಧಿಯಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುತ್ತಿರುವುದರಿಂದ ಇಕೆವೈಸಿಗೆ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ.</p>.<p>2 ತಿಂಗಳ ಇಕೆವೈಸಿ ಅವಧಿಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ದಿನ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯುವಂತೆ ಸೂಚನೆ ನೀಡಲಾಗಿದೆ. ಸೋಮವಾರದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.</p>.<p>ಅಕ್ರಮವಾಗಿ ಬಿಪಿಎಲ್ ಕಾರ್ಡ್ಗಳನ್ನು ಪಡೆದಿದ್ದರೆ 2 ತಿಂಗಳೊಳಗೆ ವಾಪಸ್ ಮಾಡಬೇಕು. ಇಲ್ಲವಾದರೆ, ದಂಡದ ವಿಧಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದುವರೆಗೂ ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಅನರ್ಹರು ಮರಳಿಸಿದ್ದಾರೆ. ₹ 96 ಲಕ್ಷಕ್ಕೂ ಹೆಚ್ಚು ದಂಡ ಪಾವತಿಸಿದ್ದಾರೆ. ಖುದ್ದು ಕಾರ್ಡ್ ಮರಳಿಸಿದರೆ ದಂಡವಿಲ್ಲ, ಸಿಕ್ಕಿಬಿದ್ದರೆ ಇದುವರೆಗೂ ಪಡೆದ ಪಡಿತರಕ್ಕೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>