<p><strong>ಶಿರ್ವ:</strong> ನಕಲಿ ಚಿನ್ನಾಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು ವಂಚಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. </p>.<p>ತೆಂಕನಿಡಿಯೂರು ಲಕ್ಷ್ಮಿನಗರದ ನಗರದ ಸುದೀಪ್ ಪೂಜಾರಿ, ಅಂಬಲಪಾಡಿ ಕಪ್ಪೆಟ್ಟುವಿನ ಪುನೀತ್ ಆನಂದ ಕೋಟ್ಯಾನ್, ಕಟಪಾಡಿ ಏಣಗುಡ್ಡೆಯ ರಂಜನ್ ಕುಮಾರ್, ಪೆರ್ಡೂರು ಅಲಂಗಾರಿನ ಸರ್ವಜಿತ್ ಎಚ್, ಮಹಾರಾಷ್ಟ್ರ ಶ್ರೀನಗರದ ರಾಜೇಶ್ ದಿಲೀಪ್ ಪಾಟೀಲ್ ಬಂಧಿತರು.</p>.<p>ಮೂಡುಬೆಳ್ಳೆ ಕಟ್ಟಿಂಗೇರಿ ಗ್ರಾಮದ ಕರ್ನಾಟಕ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಎಸಗಿರುವ ಬಗ್ಗೆ ಕಟ್ಟಿಂಗೇರಿ ಶಾಖೆಯ ವ್ಯವಸ್ಥಾಪಕರು ನೀಡಿರುವ ದೂರನ್ನು ಆಧರಿಸಿ, ಶಿರ್ವ ಠಾಣಾ ಪೊಲೀಸರು ಐವರನ್ನು ಬಂಧಿಸಿ ₹4.30 ಲಕ್ಷ ನಗದು ಹಾಗೂ ನಕಲಿ ಹಾಲ್ ಮಾರ್ಕ್ ಹಾಕಲು ಬಳಸಿದ್ದ ಲೇಸರ್ ಯಂತ್ರ ಹಾಗೂ ಕಂಪ್ಯೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. <br><br> ಉಡುಪಿ ಜಿಲ್ಲೆಯಲ್ಲಿ ನಕಲಿ ಚಿನ್ನಾಭರಣಗಳನ್ನು ಇರಿಸಿ ಸಾಲ ಪಡೆಯುವರ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ, ಕಾಪು ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡದವರು ಬೆಂಗಳೂರು, ಗೋವಾ, ಮುಂಬೈ ಹಾಗೂ ದೆಹಲಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ ಠಾಣೆಗಳಲ್ಲಿ ಈ ರೀತಿ ನಕಲಿ ಆಭರಣ ಅಡವಿಟ್ಟು ಸಾಲ ಪಡೆದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.</p>.<p>ಶಿರ್ವ ಠಾಣೆ ಪಿಎಸ್ಐ ಮಂಜುನಾಥ ಮರಬದ, ಪಿಎಸ್ಐ ಲೋಹಿತ್ ಕುಮಾರ್ ಸಿಎಸ್, ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ಕುಮಾರ್ ಟಿ ನಾಯ್, ಶ್ರೀಧರ್ ಕೆ.ಜೆ. ಸಿಬ್ಬಂದಿ ಕಿಶೋರ್, ಮಂಜುನಾಥ, ಅರುಣ್, ಸಿದ್ದ ರಾಯಪ್ಪ, ನಾಗರಾಜ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. </p>
<p><strong>ಶಿರ್ವ:</strong> ನಕಲಿ ಚಿನ್ನಾಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು ವಂಚಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. </p>.<p>ತೆಂಕನಿಡಿಯೂರು ಲಕ್ಷ್ಮಿನಗರದ ನಗರದ ಸುದೀಪ್ ಪೂಜಾರಿ, ಅಂಬಲಪಾಡಿ ಕಪ್ಪೆಟ್ಟುವಿನ ಪುನೀತ್ ಆನಂದ ಕೋಟ್ಯಾನ್, ಕಟಪಾಡಿ ಏಣಗುಡ್ಡೆಯ ರಂಜನ್ ಕುಮಾರ್, ಪೆರ್ಡೂರು ಅಲಂಗಾರಿನ ಸರ್ವಜಿತ್ ಎಚ್, ಮಹಾರಾಷ್ಟ್ರ ಶ್ರೀನಗರದ ರಾಜೇಶ್ ದಿಲೀಪ್ ಪಾಟೀಲ್ ಬಂಧಿತರು.</p>.<p>ಮೂಡುಬೆಳ್ಳೆ ಕಟ್ಟಿಂಗೇರಿ ಗ್ರಾಮದ ಕರ್ನಾಟಕ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಎಸಗಿರುವ ಬಗ್ಗೆ ಕಟ್ಟಿಂಗೇರಿ ಶಾಖೆಯ ವ್ಯವಸ್ಥಾಪಕರು ನೀಡಿರುವ ದೂರನ್ನು ಆಧರಿಸಿ, ಶಿರ್ವ ಠಾಣಾ ಪೊಲೀಸರು ಐವರನ್ನು ಬಂಧಿಸಿ ₹4.30 ಲಕ್ಷ ನಗದು ಹಾಗೂ ನಕಲಿ ಹಾಲ್ ಮಾರ್ಕ್ ಹಾಕಲು ಬಳಸಿದ್ದ ಲೇಸರ್ ಯಂತ್ರ ಹಾಗೂ ಕಂಪ್ಯೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. <br><br> ಉಡುಪಿ ಜಿಲ್ಲೆಯಲ್ಲಿ ನಕಲಿ ಚಿನ್ನಾಭರಣಗಳನ್ನು ಇರಿಸಿ ಸಾಲ ಪಡೆಯುವರ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ, ಕಾಪು ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡದವರು ಬೆಂಗಳೂರು, ಗೋವಾ, ಮುಂಬೈ ಹಾಗೂ ದೆಹಲಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ ಠಾಣೆಗಳಲ್ಲಿ ಈ ರೀತಿ ನಕಲಿ ಆಭರಣ ಅಡವಿಟ್ಟು ಸಾಲ ಪಡೆದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.</p>.<p>ಶಿರ್ವ ಠಾಣೆ ಪಿಎಸ್ಐ ಮಂಜುನಾಥ ಮರಬದ, ಪಿಎಸ್ಐ ಲೋಹಿತ್ ಕುಮಾರ್ ಸಿಎಸ್, ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ಕುಮಾರ್ ಟಿ ನಾಯ್, ಶ್ರೀಧರ್ ಕೆ.ಜೆ. ಸಿಬ್ಬಂದಿ ಕಿಶೋರ್, ಮಂಜುನಾಥ, ಅರುಣ್, ಸಿದ್ದ ರಾಯಪ್ಪ, ನಾಗರಾಜ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. </p>