<p><strong>ಬಾರ್ಕೂರು(ಬ್ರಹ್ಮಾವರ):</strong> ಕೃಷಿ ಇಲಾಖೆಯಿಂದ ಹಲವು ಯೋಜನೆಗಳು ರೈತರಿಗೆ ಲಭ್ಯವಿದ್ದು, ಮಾಹಿತಿಯನ್ನು ರೈತರಿಗೆ ತಲುಪಿಸುವ ಸಲುವಾಗಿ ಕೃಷಿ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಬಾರ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಶಾಂತರಾಮ ಶೆಟ್ಟಿ ಎಂದು ಹೇಳಿದರು.</p>.<p>ಬಾರ್ಕೂರಿನಲ್ಲಿ ಗುರುವಾರ ಉಡುಪಿ ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯಿತಿ ಅಶ್ರಯದಲ್ಲಿ ನಡೆದ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೃಷಿ ಇಲಾಖೆ ಜತೆಗೆ ಸದಾ ಸಂಪರ್ಕದಲ್ಲಿದ್ದು, ವೈಜ್ಞಾನಿಕ ಕೃಷಿ ಮಾಡಿದಲ್ಲಿ ಕೃಷಿಯಲ್ಲಿ ಲಾಭ ಕಂಡುಕೊಳ್ಳಬಹುದು. ಕೋವಿಡ್ ಸಂದರ್ಭದಲ್ಲಿ ಕೃಷಿಯೇ ರೈತರ ಕೈ ಹಿಡಿದಿದ್ದು, ಕೃಷಿಗೆ ಭವಿಷ್ಯವಿದೆ ಮತ್ತು ಯುವ ಪೀಳಿಗೆ ಕೃಷಿ ಮಾಡುವಲ್ಲಿ ಮುಂದೆ ಬರಬೇಕು ಎಂದು ಹೇಳಿದರು.</p>.<p><a href="https://www.prajavani.net/karnataka-news/hd-kumaraswamy-reaction-to-vijeta-ananthkumar-tweet-on-jds-he-welcomes-tejaswini-ananth-kumar-and-853020.html" itemprop="url">ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್ಡಿಕೆ </a></p>.<p>ಉಡುಪಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಕೃಷಿ ಅಭಿಯಾನದ ಉದ್ದೇಶ ಮತ್ತು ಇಲಾಖೆ ಯೋಜನೆಗಳ ಬಗ್ಗೆ ಮತ್ತು ಜಿಲ್ಲಾ ವಿಮೆ ಸಂಯೋಜಕ ರವೀಂದ್ರ ಮೊಗವೀರ ಬೆಳೆ ವಿಮೆ ಕುರಿತು ಮಾಹಿತಿ<br />ನೀಡಿದರು.</p>.<p>ಬಾರ್ಕೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಉಷಾ, ಕೃಷಿ ವಿಜ್ಞಾನಿ ಸ್ವಾತಿ ಶೆಟ್ಟಿ, ಕೋಟ ಕೃಷಿ ಅಧಿಕಾರಿ ಸುಪ್ರಭಾ, ಪಂಚಾಯಿತಿ ಪಿಡಿಒ ವಂದನಾ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್ ಶೆಟ್ಟಿ ಆತ್ಮ ಸಂಯೋಜಕಿ ಸಂಜನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾರ್ಕೂರು(ಬ್ರಹ್ಮಾವರ):</strong> ಕೃಷಿ ಇಲಾಖೆಯಿಂದ ಹಲವು ಯೋಜನೆಗಳು ರೈತರಿಗೆ ಲಭ್ಯವಿದ್ದು, ಮಾಹಿತಿಯನ್ನು ರೈತರಿಗೆ ತಲುಪಿಸುವ ಸಲುವಾಗಿ ಕೃಷಿ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಬಾರ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಶಾಂತರಾಮ ಶೆಟ್ಟಿ ಎಂದು ಹೇಳಿದರು.</p>.<p>ಬಾರ್ಕೂರಿನಲ್ಲಿ ಗುರುವಾರ ಉಡುಪಿ ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯಿತಿ ಅಶ್ರಯದಲ್ಲಿ ನಡೆದ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೃಷಿ ಇಲಾಖೆ ಜತೆಗೆ ಸದಾ ಸಂಪರ್ಕದಲ್ಲಿದ್ದು, ವೈಜ್ಞಾನಿಕ ಕೃಷಿ ಮಾಡಿದಲ್ಲಿ ಕೃಷಿಯಲ್ಲಿ ಲಾಭ ಕಂಡುಕೊಳ್ಳಬಹುದು. ಕೋವಿಡ್ ಸಂದರ್ಭದಲ್ಲಿ ಕೃಷಿಯೇ ರೈತರ ಕೈ ಹಿಡಿದಿದ್ದು, ಕೃಷಿಗೆ ಭವಿಷ್ಯವಿದೆ ಮತ್ತು ಯುವ ಪೀಳಿಗೆ ಕೃಷಿ ಮಾಡುವಲ್ಲಿ ಮುಂದೆ ಬರಬೇಕು ಎಂದು ಹೇಳಿದರು.</p>.<p><a href="https://www.prajavani.net/karnataka-news/hd-kumaraswamy-reaction-to-vijeta-ananthkumar-tweet-on-jds-he-welcomes-tejaswini-ananth-kumar-and-853020.html" itemprop="url">ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್ಡಿಕೆ </a></p>.<p>ಉಡುಪಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಕೃಷಿ ಅಭಿಯಾನದ ಉದ್ದೇಶ ಮತ್ತು ಇಲಾಖೆ ಯೋಜನೆಗಳ ಬಗ್ಗೆ ಮತ್ತು ಜಿಲ್ಲಾ ವಿಮೆ ಸಂಯೋಜಕ ರವೀಂದ್ರ ಮೊಗವೀರ ಬೆಳೆ ವಿಮೆ ಕುರಿತು ಮಾಹಿತಿ<br />ನೀಡಿದರು.</p>.<p>ಬಾರ್ಕೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಉಷಾ, ಕೃಷಿ ವಿಜ್ಞಾನಿ ಸ್ವಾತಿ ಶೆಟ್ಟಿ, ಕೋಟ ಕೃಷಿ ಅಧಿಕಾರಿ ಸುಪ್ರಭಾ, ಪಂಚಾಯಿತಿ ಪಿಡಿಒ ವಂದನಾ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್ ಶೆಟ್ಟಿ ಆತ್ಮ ಸಂಯೋಜಕಿ ಸಂಜನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>