<p><strong>ಉಡುಪಿ:</strong> ಮಲ್ಪೆ ಬಂದರಿನಲ್ಲಿ ಏಲಂ ಕಾರ್ಮಿಕರೊಬ್ಬರ ಮೇಲೆ ಬೋಟ್ ಮಾಲೀಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು), ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಚಿಂತಕ ಫಣಿರಾಜ್ ಮಾತನಾಡಿ, ‘ಮಲ್ಪೆ ಬಂದರಿನಲ್ಲಿ ಶ್ರಮಿಕರನ್ನು ಜಾತಿ, ಮತದ ಹೆಸರಿನಲ್ಲಿ ಒಡೆಯಲಾಗುತ್ತಿದೆ. ಕಾರ್ಮಿಕರ ಮೇಲೆ ಫ್ಯಾಸಿಸ್ಟ್ ದಬ್ಬಾಳಿಕೆ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>‘ಬಂದರಿನಲ್ಲಿ ದೌರ್ಜನ್ಯ ನಡೆಯುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತುಕೊಳ್ಳುವುದು ಸರಿಯಲ್ಲ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ‘ಮಲ್ಪೆ ಬಂದರಿನಲ್ಲಿ ಸರ್ವಧರ್ಮದ ಜನರಿಗೆ ದುಡಿಯುವ ಹಕ್ಕಿದೆ. ಆದರೆ ಅಲ್ಲಿನ ಬಲಾಢ್ಯ ಸಮುದಾಯದವರು ದೌರ್ಜನ್ಯ ನಡೆಸುತ್ತಿದ್ದಾರೆ’ ಎಂದರು.</p>.<p>ಸಹಬಾಳ್ವೆ ಉಡುಪಿ ಸಂಚಾಲಕ ಇದ್ರಿಸ್ ಹೂಡೆ ಮಾತನಾಡಿ, ‘ಮಲ್ಪೆ ಬಂದರು ದೇಶದ ಅತಿ ದೊಡ್ಡ ಮೀನುಗಾರಿಕಾ ಬಂದರಾಗಿದ್ದು, ಅಲ್ಲಿ ರಾಜ್ಯ, ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಜನರ ತೆರಿಗೆ ಹಣದಲ್ಲಿ ನಿರ್ಮಾಣವಾಗಿರುವ ಬಂದರಿನಲ್ಲಿ ಎಲ್ಲರಿಗೂ ದುಡಿಯುವ ಹಕ್ಕಿದೆ’ ಎಂದರು.</p>.<p>‘ಬಂದರಿನಲ್ಲಿ ಈಚೆಗೆ ಏಲಂ ಕಾರ್ಮಿಕ ಶೇಕ್ ಆಯೂಬ್ ಮೇಲೆ ನಡೆದಿರುವ ಹಲ್ಲೆ ಖಂಡನೀಯ’ ಎಂದರು.</p>.<p>ಹಲ್ಲೆಗೊಳಗಾದ ಕಾರ್ಮಿಕ ಶೇಕ್ ಆಯೂಬ್ ಅವರಿಗೆ ಸರ್ಕಾರದ ವತಿಯಿಂದ ಪರಿಹಾರ ಧನ ನೀಡಬೇಕು. ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಸಂತ್ರಸ್ತ ಕಾರ್ಮಿಕನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು, ಬಂದರಿನಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸಿ, ಅಲ್ಲಿ ನಡೆಯುತ್ತಿರುವ ಎಲ್ಲಾ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಯಿತು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಪ್ರಮುಖರಾದ ಸುರೇಶ್ ಕಲ್ಲಾಗರ, ಚಂದ್ರಶೇಖರ್ ದೇವಾಡಿಗ, ಮುಂಜುನಾಥ ಬಾಳೆಕುದ್ರು, ಶಶಿಧರ ಗೊಲ್ಲ, ಅಜೀಜ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಲ್ಪೆ ಬಂದರಿನಲ್ಲಿ ಏಲಂ ಕಾರ್ಮಿಕರೊಬ್ಬರ ಮೇಲೆ ಬೋಟ್ ಮಾಲೀಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು), ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಬುಧವಾರ ಪ್ರತಿಭಟನೆ ನಡೆಯಿತು.</p>.<p>ಚಿಂತಕ ಫಣಿರಾಜ್ ಮಾತನಾಡಿ, ‘ಮಲ್ಪೆ ಬಂದರಿನಲ್ಲಿ ಶ್ರಮಿಕರನ್ನು ಜಾತಿ, ಮತದ ಹೆಸರಿನಲ್ಲಿ ಒಡೆಯಲಾಗುತ್ತಿದೆ. ಕಾರ್ಮಿಕರ ಮೇಲೆ ಫ್ಯಾಸಿಸ್ಟ್ ದಬ್ಬಾಳಿಕೆ ನಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>‘ಬಂದರಿನಲ್ಲಿ ದೌರ್ಜನ್ಯ ನಡೆಯುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತುಕೊಳ್ಳುವುದು ಸರಿಯಲ್ಲ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ‘ಮಲ್ಪೆ ಬಂದರಿನಲ್ಲಿ ಸರ್ವಧರ್ಮದ ಜನರಿಗೆ ದುಡಿಯುವ ಹಕ್ಕಿದೆ. ಆದರೆ ಅಲ್ಲಿನ ಬಲಾಢ್ಯ ಸಮುದಾಯದವರು ದೌರ್ಜನ್ಯ ನಡೆಸುತ್ತಿದ್ದಾರೆ’ ಎಂದರು.</p>.<p>ಸಹಬಾಳ್ವೆ ಉಡುಪಿ ಸಂಚಾಲಕ ಇದ್ರಿಸ್ ಹೂಡೆ ಮಾತನಾಡಿ, ‘ಮಲ್ಪೆ ಬಂದರು ದೇಶದ ಅತಿ ದೊಡ್ಡ ಮೀನುಗಾರಿಕಾ ಬಂದರಾಗಿದ್ದು, ಅಲ್ಲಿ ರಾಜ್ಯ, ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಜನರ ತೆರಿಗೆ ಹಣದಲ್ಲಿ ನಿರ್ಮಾಣವಾಗಿರುವ ಬಂದರಿನಲ್ಲಿ ಎಲ್ಲರಿಗೂ ದುಡಿಯುವ ಹಕ್ಕಿದೆ’ ಎಂದರು.</p>.<p>‘ಬಂದರಿನಲ್ಲಿ ಈಚೆಗೆ ಏಲಂ ಕಾರ್ಮಿಕ ಶೇಕ್ ಆಯೂಬ್ ಮೇಲೆ ನಡೆದಿರುವ ಹಲ್ಲೆ ಖಂಡನೀಯ’ ಎಂದರು.</p>.<p>ಹಲ್ಲೆಗೊಳಗಾದ ಕಾರ್ಮಿಕ ಶೇಕ್ ಆಯೂಬ್ ಅವರಿಗೆ ಸರ್ಕಾರದ ವತಿಯಿಂದ ಪರಿಹಾರ ಧನ ನೀಡಬೇಕು. ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಸಂತ್ರಸ್ತ ಕಾರ್ಮಿಕನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು, ಬಂದರಿನಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪಿಸಿ, ಅಲ್ಲಿ ನಡೆಯುತ್ತಿರುವ ಎಲ್ಲಾ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಯಿತು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಪ್ರಮುಖರಾದ ಸುರೇಶ್ ಕಲ್ಲಾಗರ, ಚಂದ್ರಶೇಖರ್ ದೇವಾಡಿಗ, ಮುಂಜುನಾಥ ಬಾಳೆಕುದ್ರು, ಶಶಿಧರ ಗೊಲ್ಲ, ಅಜೀಜ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>