ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಬಳಿ ಅಪಘಾತ: ಬೆಳಗಾವಿ ಮೂಲದ ತಂದೆ ಸಾವು, ಮಗನ ಸ್ಥಿತಿ ಗಂಭೀರ

Last Updated 14 ಸೆಪ್ಟೆಂಬರ್ 2022, 7:36 IST
ಅಕ್ಷರ ಗಾತ್ರ

ಕಾಪು (ಉಡುಪಿ): ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ವಾಹನವೊಂದು ಡಿಕ್ಕಿಯಾಗಿ ಬೆಳಗಾವಿ ಮೂಲದ ಪ್ರಭಾಕರ ಖೋತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅವರ ಮಗ ಸಮರ್ಥ್ (14) ತೀವ್ರ ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗ ಸಮರ್ಥನನ್ನು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ದಾಖಲಾತಿ ಮಾಡಲು ಬಂದಿದ್ದರು. ಇಬ್ಬರೂ ಬೆಳಗಾವಿಯಿಂದ ಮಂಗಳವಾರ ರಾತ್ರಿ ಬಸ್ಸು ಮೂಲಕ ಹೊರಟು, ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು,ಸಮರ್ಥ್ ಗಂಭೀರ ಗಾಯಗೊಂಡಿದ್ದಾನೆ.

ಪಡುಬಿದ್ರಿ‌ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT