<p><strong>ಬ್ರಹ್ಮಾವರ:</strong> ದೂರದೃಷ್ಟಿಯೊಂದಿಗೆ ಗುರಿ ಮತ್ತು ಉದ್ದೇಶವನ್ನು ಹೊಂದಿರುವ ಸಂಸ್ಥೆ ದೀರ್ಘ ಕಾಲ ಕಾರ್ಯ ನಿರ್ವಹಿಸುತ್ತದೆ ಎಂದು ಸಾಸ್ತಾನ ಸಂತ ಅಂತೋನಿ ಚರ್ಚ್ನ ಧರ್ಮಗುರು ಸುನಿಲ್ ಡಿಸಿಲ್ವ ಹೇಳಿದರು.</p>.<p>ಬಾಳ್ಕುದ್ರು ಹಂಗಾರಕಟ್ಟೆ ಕೈಂಡ್ ಹಾರ್ಟ್ ಟ್ರಸ್ಟ್ ಹಾಗೂ ಬ್ರಹ್ಮಾವರ ರೋಟರಿ ಕ್ಲಬ್ ಆಶ್ರಯದಲ್ಲಿ ಬ್ರಹ್ಮಾವರ ರೋಟರಿ ಭವನದಲ್ಲಿ ಬುಧವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ನೀಡುವ ಸೇವೆ ಇನ್ನೊಬ್ಬರ ಹೃದಯವನ್ನು ಮುಟ್ಟುವಂಥದ್ದಾಗಿರಬೇಕು. ಉತ್ತಮ ಕಾರ್ಯಗಳ ಮೂಲಕ ನಾವು ಸಮಾಜದಲ್ಲಿ ಶಾಶ್ವತವಾದ ಹೆಸರು ಮಾಡಬೇಕು. ಮುಕ್ತ ಹೃದಯದಿಂದ ಇನ್ನೊಬ್ಬರಿಗೆ ಮಾಡಿದ ಸೇವೆಗೆ ಭಗವಂತನ ಪ್ರತಿಫಲ ಸದಾ ಇದೆ. ಹಸಿದವನಿಗೆ ಕೊಟ್ಟ ರೊಟ್ಟಿಯ ಸಹಾಯ ದೇವರಿಗೆ ಸದಾ ಪ್ರಿಯವಾದುದು. ಆದ್ದರಿಂದ ಸೇವೆಯನ್ನು ಪ್ರೀತಿಯಿಂದ ಮಾಡೋಣ’ ಎಂದರು.</p>.<p>ಬ್ರಹ್ಮಾವರ ನಿರ್ಮಲ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮಥಾಯಸ್ ಡಾಯಸ್ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಹೆತ್ತವರಿಗೆ ಮಾತ್ರವಲ್ಲ, ಸಮಾಜಕ್ಕೂ ಗೌರವ ತಂದು ಕೊಡುತ್ತದೆ. ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಹೆತ್ತವರ ಪಾತ್ರ ಮಹತ್ವದ್ದು. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ಮೊಟಕುಗೊಳಿಸದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ತೋರುವಂತಾಗಬೇಕು ಎಂದರು.</p>.<p>ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ 10 ಪ್ರೌಢಶಾಲೆಗಳ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ರೋಟರಿಯ ವಾಲ್ಟರ್ ಸಿರಿಲ್ ಪಿಂಟೊ, ಜಗದೀಶ ಕೆಮ್ಮಣ್ಣು, ಶ್ರೀಧರ ಶೆಟ್ಟಿ, ಹರೀಶ ಕುಂದರ್, ರೆಕ್ಸನ್ ಮೋನಿಸ್, ಚೇತನಾ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಗಣೇಶ ಜಿ ಇದ್ದರು. ಕೈಂಡ್ ಹಾರ್ಟ್ ಟ್ರಸ್ಟ್ ಅಧ್ಯಕ್ಷ ಹೆನ್ರಿ ಲೂವಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೆನಿಸ್ ರೊಡ್ರಿಗಸ್ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಪ್ರಶಾಂತ ಶೆಟ್ಟಿ ಪ್ರಾರ್ಥಿಸಿದರು. ರೂಬಿನಾ ರೊಡ್ರಿಗಸ್ ಸ್ವಾಗತಿಸಿದರು. ಸುಜಾತಾ ಅಂದ್ರಾದೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ದೂರದೃಷ್ಟಿಯೊಂದಿಗೆ ಗುರಿ ಮತ್ತು ಉದ್ದೇಶವನ್ನು ಹೊಂದಿರುವ ಸಂಸ್ಥೆ ದೀರ್ಘ ಕಾಲ ಕಾರ್ಯ ನಿರ್ವಹಿಸುತ್ತದೆ ಎಂದು ಸಾಸ್ತಾನ ಸಂತ ಅಂತೋನಿ ಚರ್ಚ್ನ ಧರ್ಮಗುರು ಸುನಿಲ್ ಡಿಸಿಲ್ವ ಹೇಳಿದರು.</p>.<p>ಬಾಳ್ಕುದ್ರು ಹಂಗಾರಕಟ್ಟೆ ಕೈಂಡ್ ಹಾರ್ಟ್ ಟ್ರಸ್ಟ್ ಹಾಗೂ ಬ್ರಹ್ಮಾವರ ರೋಟರಿ ಕ್ಲಬ್ ಆಶ್ರಯದಲ್ಲಿ ಬ್ರಹ್ಮಾವರ ರೋಟರಿ ಭವನದಲ್ಲಿ ಬುಧವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾವು ನೀಡುವ ಸೇವೆ ಇನ್ನೊಬ್ಬರ ಹೃದಯವನ್ನು ಮುಟ್ಟುವಂಥದ್ದಾಗಿರಬೇಕು. ಉತ್ತಮ ಕಾರ್ಯಗಳ ಮೂಲಕ ನಾವು ಸಮಾಜದಲ್ಲಿ ಶಾಶ್ವತವಾದ ಹೆಸರು ಮಾಡಬೇಕು. ಮುಕ್ತ ಹೃದಯದಿಂದ ಇನ್ನೊಬ್ಬರಿಗೆ ಮಾಡಿದ ಸೇವೆಗೆ ಭಗವಂತನ ಪ್ರತಿಫಲ ಸದಾ ಇದೆ. ಹಸಿದವನಿಗೆ ಕೊಟ್ಟ ರೊಟ್ಟಿಯ ಸಹಾಯ ದೇವರಿಗೆ ಸದಾ ಪ್ರಿಯವಾದುದು. ಆದ್ದರಿಂದ ಸೇವೆಯನ್ನು ಪ್ರೀತಿಯಿಂದ ಮಾಡೋಣ’ ಎಂದರು.</p>.<p>ಬ್ರಹ್ಮಾವರ ನಿರ್ಮಲ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮಥಾಯಸ್ ಡಾಯಸ್ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಹೆತ್ತವರಿಗೆ ಮಾತ್ರವಲ್ಲ, ಸಮಾಜಕ್ಕೂ ಗೌರವ ತಂದು ಕೊಡುತ್ತದೆ. ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಹೆತ್ತವರ ಪಾತ್ರ ಮಹತ್ವದ್ದು. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ಮೊಟಕುಗೊಳಿಸದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ತೋರುವಂತಾಗಬೇಕು ಎಂದರು.</p>.<p>ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ 10 ಪ್ರೌಢಶಾಲೆಗಳ ಹತ್ತನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ರೋಟರಿಯ ವಾಲ್ಟರ್ ಸಿರಿಲ್ ಪಿಂಟೊ, ಜಗದೀಶ ಕೆಮ್ಮಣ್ಣು, ಶ್ರೀಧರ ಶೆಟ್ಟಿ, ಹರೀಶ ಕುಂದರ್, ರೆಕ್ಸನ್ ಮೋನಿಸ್, ಚೇತನಾ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಗಣೇಶ ಜಿ ಇದ್ದರು. ಕೈಂಡ್ ಹಾರ್ಟ್ ಟ್ರಸ್ಟ್ ಅಧ್ಯಕ್ಷ ಹೆನ್ರಿ ಲೂವಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೆನಿಸ್ ರೊಡ್ರಿಗಸ್ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಪ್ರಶಾಂತ ಶೆಟ್ಟಿ ಪ್ರಾರ್ಥಿಸಿದರು. ರೂಬಿನಾ ರೊಡ್ರಿಗಸ್ ಸ್ವಾಗತಿಸಿದರು. ಸುಜಾತಾ ಅಂದ್ರಾದೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>