<p><strong>ಹೆಬ್ರಿ</strong> : ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತರಬೇತಿ ಹಾಗೂ ಉದ್ಯೋಗ ಕೋಶ ಸಮಿತಿ ಹಾಗೂ ಐಕ್ಯುಎಸಿ ಸಹಕಾರದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಕಾರ್ಕಳ ಕೆನರಾ ಬ್ಯಾಂಕ್ ಎಫ್ಎಲ್ಸಿ ಕೌನ್ಸೆಲರ್ ಪ್ರದೀಪ್ ಕೆ ಮಾತನಾಡಿ, ಡಿಜಿಟಲ್ ಸಂಬಂಧಿತ ವಂಚನೆಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಡಿಜಿಟಲ್ ಅಪರಾಧಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.</p>.<p>ಪ್ರಾಂಶುಪಾಲ ಸುಧಾಕರ ಕೆ.ಜಿ.ಮಾತನಾಡಿ, ತಂತ್ರಜ್ಞಾನದ ಈ ಯುಗದಲ್ಲಿ ಆಗುವಂತಹ ಡಿಜಿಟಲ್ ಅಪರಾಧಗಳಿಗೆ ಮುನ್ನಚ್ಚರಿಗೆ ಅತ್ಯಗತ್ಯ. ಕಾಲ ಕಾಲಕ್ಕೆ ಇಂತಹ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿರಬೇಕು ಎಂದು ಹೇಳಿದರು.</p>.<p>ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆನಂದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರುಡ್ ಸೆಟ್ ಸಂಸ್ಥೆಯ ಶಿಕ್ಷಕ ಸಂತೋಷ ಶೆಟ್ಟಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿಶ್ವೇಶ್ವರ ಎನ್ ಗಾಂವ್ಕರ್, ಐಕ್ಯುಎಸಿ ಸಂಚಾಲಕಿ ಝೈಬುನ್ನಿಸ್ಸ ಉಪಸ್ಥಿತರಿದ್ದರು. ಬಿಂದು ಎ ಸ್ವಾಗತಿಸಿದರು. ಅಕ್ಷತಾ ಎಸ್ ವಂದಿಸಿದರು. ಅನುಷ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong> : ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ತರಬೇತಿ ಹಾಗೂ ಉದ್ಯೋಗ ಕೋಶ ಸಮಿತಿ ಹಾಗೂ ಐಕ್ಯುಎಸಿ ಸಹಕಾರದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಕಾರ್ಕಳ ಕೆನರಾ ಬ್ಯಾಂಕ್ ಎಫ್ಎಲ್ಸಿ ಕೌನ್ಸೆಲರ್ ಪ್ರದೀಪ್ ಕೆ ಮಾತನಾಡಿ, ಡಿಜಿಟಲ್ ಸಂಬಂಧಿತ ವಂಚನೆಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಡಿಜಿಟಲ್ ಅಪರಾಧಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.</p>.<p>ಪ್ರಾಂಶುಪಾಲ ಸುಧಾಕರ ಕೆ.ಜಿ.ಮಾತನಾಡಿ, ತಂತ್ರಜ್ಞಾನದ ಈ ಯುಗದಲ್ಲಿ ಆಗುವಂತಹ ಡಿಜಿಟಲ್ ಅಪರಾಧಗಳಿಗೆ ಮುನ್ನಚ್ಚರಿಗೆ ಅತ್ಯಗತ್ಯ. ಕಾಲ ಕಾಲಕ್ಕೆ ಇಂತಹ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿರಬೇಕು ಎಂದು ಹೇಳಿದರು.</p>.<p>ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆನಂದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರುಡ್ ಸೆಟ್ ಸಂಸ್ಥೆಯ ಶಿಕ್ಷಕ ಸಂತೋಷ ಶೆಟ್ಟಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿಶ್ವೇಶ್ವರ ಎನ್ ಗಾಂವ್ಕರ್, ಐಕ್ಯುಎಸಿ ಸಂಚಾಲಕಿ ಝೈಬುನ್ನಿಸ್ಸ ಉಪಸ್ಥಿತರಿದ್ದರು. ಬಿಂದು ಎ ಸ್ವಾಗತಿಸಿದರು. ಅಕ್ಷತಾ ಎಸ್ ವಂದಿಸಿದರು. ಅನುಷ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>