<p><strong>ಉಡುಪಿ:</strong> ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ, ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.</p>.<p>ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಈವರೆಗೆ 5,661 ಅರ್ಜಿಗಳು ಸ್ವೀಕೃತವಾಗಿದ್ದು, 1,337 ಅರ್ಜಿಗಳು ತಿರಸ್ಕೃತಗೊಂಡು, 3,937 ಫಲಾನುಭವಿಗಳಿಗೆ ₹35.29 ಕೋಟಿ ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.</p>.<p>ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳಿಗಾಗಿ ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಟಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗದಿತ ಗುರಿಯಲ್ಲಿ, 91 ಫಲಾನುಭವಿಗಳಿಗೆ ₹10.06 ಕೋಟಿ ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.</p>.<p>ಕೃಷಿ ವಲಯಕ್ಕೆ ₹4,230 ಕೋಟಿ ನಿಗದಿತ ಗುರಿಯಲ್ಲಿ ₹2,274 ಕೋಟಿ ಗುರಿ ಸಾಧಿಸಿ ಶೇ 53.76ರಷ್ಟು, ಎಂ.ಎಸ್.ಎಂ.ಇ. ವಲಯಕ್ಕೆ ₹3,713 ಕೋಟಿ ಗುರಿ ನಿಗದಿಪಡಿಸಲಾಗಿದ್ದು, ₹2,426 ಕೋಟಿ ಗುರಿ ಸಾಧಿಸಿ ಶೇ 65.35ರಷ್ಟು ಸಾಧನೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಶಿಕ್ಷಣ ವಲಯಕ್ಕೆ ₹187 ಕೋಟಿ ನಿಗದಿತ ಗುರಿಯಲ್ಲಿ ₹116 ಕೋಟಿ ಗುರಿ ಸಾಧಿಸಿ ಶೇ 62.12ರಷ್ಟು, ವಸತಿ ಕ್ಷೇತ್ರಗಳಿಗೆ ₹510 ಕೋಟಿ ನಿಗದಿತ ಗುರಿಯಲ್ಲಿ ₹111 ಕೋಟಿ ಗುರಿ ಸಾಧಿಸಿ ಶೇ 21.85ರಷ್ಟು, ಇತರೆ ಕ್ಷೇತ್ರಗಳಿಗೆ ₹399 ಕೋಟಿ ನಿಗದಿತ ಗುರಿಯಲ್ಲಿ ₹193 ಕೋಟಿ ಗುರಿ ಸಾಧಿಸಿ ಶೇ 48.46ರಷ್ಟು ಹಾಗೂ ಆದ್ಯತೇತರ ವಲಯಗಳಿಗೆ ₹6,474 ಕೋಟಿ ನಿಗದಿತ ಗುರಿಯಲ್ಲಿ ₹3,819 ಕೋಟಿ ಗುರಿ ಸಾಧಿಸಿ ಶೇ 58.99ರಷ್ಟು ಸಾಧನೆ ಮಾಡಲಾಗಿದೆ ಎಂದರು.</p>.<p>ಕೆನರಾ ಬ್ಯಾಂಕ್ ರೀಜನಲ್ ಮ್ಯಾನೇಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ 47.66ರಷ್ಟು ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ 48.62ರಷ್ಟಾಗಿ ಶೇ 0.96ರಷ್ಟು ಏರಿಕೆಯಾಗಿದೆ’ ಎಂದರು.</p>.<p>ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ. ಇದ್ದರು.</p>.<div><blockquote>ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಾಲ ಠೇವಣಿ (ಸಿ.ಡಿ.) ಅನುಪಾತವು ಶೇ 50ಕ್ಕಿಂತ ಕಡಿಮೆ ಇರಬಾರದು. ಅದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್ಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು </blockquote><span class="attribution">ನಿಶಾ ಠಾಕೂರ್, ಆರ್ಬಿಐ ಎಫ್.ಐ.ಡಿ.ಡಿ ಲೀಡ್ ಡಿಸ್ಟ್ರಿಕ್ಟ್ ಆಫೀಸರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ, ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.</p>.<p>ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಈವರೆಗೆ 5,661 ಅರ್ಜಿಗಳು ಸ್ವೀಕೃತವಾಗಿದ್ದು, 1,337 ಅರ್ಜಿಗಳು ತಿರಸ್ಕೃತಗೊಂಡು, 3,937 ಫಲಾನುಭವಿಗಳಿಗೆ ₹35.29 ಕೋಟಿ ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.</p>.<p>ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳಿಗಾಗಿ ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಟಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗದಿತ ಗುರಿಯಲ್ಲಿ, 91 ಫಲಾನುಭವಿಗಳಿಗೆ ₹10.06 ಕೋಟಿ ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.</p>.<p>ಕೃಷಿ ವಲಯಕ್ಕೆ ₹4,230 ಕೋಟಿ ನಿಗದಿತ ಗುರಿಯಲ್ಲಿ ₹2,274 ಕೋಟಿ ಗುರಿ ಸಾಧಿಸಿ ಶೇ 53.76ರಷ್ಟು, ಎಂ.ಎಸ್.ಎಂ.ಇ. ವಲಯಕ್ಕೆ ₹3,713 ಕೋಟಿ ಗುರಿ ನಿಗದಿಪಡಿಸಲಾಗಿದ್ದು, ₹2,426 ಕೋಟಿ ಗುರಿ ಸಾಧಿಸಿ ಶೇ 65.35ರಷ್ಟು ಸಾಧನೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಶಿಕ್ಷಣ ವಲಯಕ್ಕೆ ₹187 ಕೋಟಿ ನಿಗದಿತ ಗುರಿಯಲ್ಲಿ ₹116 ಕೋಟಿ ಗುರಿ ಸಾಧಿಸಿ ಶೇ 62.12ರಷ್ಟು, ವಸತಿ ಕ್ಷೇತ್ರಗಳಿಗೆ ₹510 ಕೋಟಿ ನಿಗದಿತ ಗುರಿಯಲ್ಲಿ ₹111 ಕೋಟಿ ಗುರಿ ಸಾಧಿಸಿ ಶೇ 21.85ರಷ್ಟು, ಇತರೆ ಕ್ಷೇತ್ರಗಳಿಗೆ ₹399 ಕೋಟಿ ನಿಗದಿತ ಗುರಿಯಲ್ಲಿ ₹193 ಕೋಟಿ ಗುರಿ ಸಾಧಿಸಿ ಶೇ 48.46ರಷ್ಟು ಹಾಗೂ ಆದ್ಯತೇತರ ವಲಯಗಳಿಗೆ ₹6,474 ಕೋಟಿ ನಿಗದಿತ ಗುರಿಯಲ್ಲಿ ₹3,819 ಕೋಟಿ ಗುರಿ ಸಾಧಿಸಿ ಶೇ 58.99ರಷ್ಟು ಸಾಧನೆ ಮಾಡಲಾಗಿದೆ ಎಂದರು.</p>.<p>ಕೆನರಾ ಬ್ಯಾಂಕ್ ರೀಜನಲ್ ಮ್ಯಾನೇಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ 47.66ರಷ್ಟು ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ 48.62ರಷ್ಟಾಗಿ ಶೇ 0.96ರಷ್ಟು ಏರಿಕೆಯಾಗಿದೆ’ ಎಂದರು.</p>.<p>ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ. ಇದ್ದರು.</p>.<div><blockquote>ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಾಲ ಠೇವಣಿ (ಸಿ.ಡಿ.) ಅನುಪಾತವು ಶೇ 50ಕ್ಕಿಂತ ಕಡಿಮೆ ಇರಬಾರದು. ಅದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್ಗಳ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು </blockquote><span class="attribution">ನಿಶಾ ಠಾಕೂರ್, ಆರ್ಬಿಐ ಎಫ್.ಐ.ಡಿ.ಡಿ ಲೀಡ್ ಡಿಸ್ಟ್ರಿಕ್ಟ್ ಆಫೀಸರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>