ಆಕ್ರೋಶಭರಿತ ಮೀನುಗಾರರನ್ನು ಸಮಾಧನಪಡಿಸಲು ಯತ್ನಿಸಿದ ಸಚಿವರು, ‘ಪೊಲೀಸರು, ನೌಕಾಪಡೆ ಅಧಿಕಾರಿಗಳು ಮೀನುಗಾರರ ಪತ್ತೆ ಮಾಡುತ್ತಿದ್ದಾರೆ. ಸಮುದ್ರದ ಒಳಗೆ ಹಾಗೂ ಹೊರಗೆ ಕಾರ್ಯಾಚರಣೆ ನಡೆಯುತ್ತಿದೆ. ಇಸ್ರೋ ಸ್ಯಾಟಲೈಟ್ ನೆರವು ಪಡೆಯಲು ನಿರ್ಧರಿಸಲಾಗಿದೆ. ನಾಪತ್ತೆಯಾದ ದಿನದಿಂದಲೂ ಶೋಧ ನಡೆಯುತ್ತಿದೆ. ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ ಎಂದು ಸಮಜಾಯಿಷಿ ನೀಡಿದರು.