ಜನತಾ ಕರ್ಫ್ಯೂ ನಾಲ್ಕನೇ ದಿನವೂ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದವರನ್ನು ತಡೆದ ಪೊಲೀಸರು ದಂಡ ಹಾಕಿ ಪ್ರಕರಣ ದಾಖಲಿಸಿದರು. ಉಡುಪಿ ಉಪವಿಭಾಗ ವ್ಯಾಪ್ತಿಯಲ್ಲಿ 9 ವಾಹನ ಸವಾರರ ಮೇಲೆ ಪ್ರಕರಣ ದಾಖಲಿಸಿ ವಾಹನ ಮುಟ್ಟುಗೋಲು ಹಾಕಿಕೊಂಡರೆ, ಕುಂದಾಪುರದಲ್ಲಿ ಒಂದು ಮತ್ತು ಕಾರ್ಕಳ ಉಪವಿಭಾಗ ವ್ಯಾಪ್ತಿಯಲ್ಲಿ ನಾಲ್ಕು ವಾಹನಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಮುಟ್ಟುಗೋಲು ಹಾಕಿಕೊಳ್ಳಲಾಯಿತು.