ಪಡುಬಿದ್ರಿ ಪೊಲೀಸ್ ಠಾಣೆ ಸಮೀಪದ ಪಂಚಾಯಿತಿ ಕಟ್ಟಡದಲ್ಲಿರುವ ದಿನೇಶ್ ಅವರಿಗೆ ಸೇರಿದ ಅವಿಘ್ನ ಅಕ್ವೇರಿಯಂ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಮಳಿಗೆಯಲ್ಲಿನ ಮೀನುಗಳು, ಮಾರಾಟದ ಲವ್ ಬರ್ಡ್ಸ್ಗಳ ಸಹಿತ ದಿನಸಿ ಸಾಮಾನು ಸೇರಿ ಸುಮಾರು ₹ 4 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿದೆ. ಉಡುಪಿಯ ಅಗ್ನಿ ಶಾಮಕ ದಳದ ತುಕುಡಿಯು ಎರಡೂ ಕಡೆಗಳಿಗೆ ತೆರಳಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.