ಶುಕ್ರವಾರ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಈಚೆಗೆ ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸಚಿವರನ್ನು ಭೇಟಿಮಾಡಿ ಮೀನುಗಾರರ ಪತ್ತೆ ಮಾಡುವಂತೆ ಒತ್ತಡ ಹಾಕಿದ್ದರು. ಅದರ ಫಲವಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೌಕಾಪಡೆ ಅಧಿಕಾರಿಗಳಿಗೆ ಪತ್ತೆ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದರು.