ಮೀನುಗಾರಿಕೆಗೆ ತೆರಳಿದ್ದ ಸಾಗರ್ ಸಾಮ್ರಾಟ್ ಎಂಬ ಬೋಟ್ ಸಮುದ್ರದಲ್ಲಿ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಎಂಜಿನ್ ವಿಫಲವಾಗಿತ್ತು. ಬೋಟ್ನಲ್ಲಿದ್ದ ಸಿಬ್ಬಂದಿ ತುರ್ತು ಸಹಾಯಕ್ಕಾಗಿ ಎಂಆರ್ಸಿಸಿ ಕೇಂದ್ರಕ್ಕೆ ಮನವಿ ಮಾಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕೋಸ್ಟ್ ಗಾರ್ಡ್ ಸಿಬ್ಬಂದಿ ರಾಜ್ದೂತ್ ಶಿಪ್ನೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದರು.