‘ಸಂತಪುರ, ಮಸ್ಕಲ್ ತಾಂಡಾ, ಚಟ್ನಾಳ ತಾಂಡಾ, ಚೊನ್ನೆಕೇರಿ, ನಂದ್ಯಾಳ, ಎಕಲಾರ ತಾಂಡಾ, ಕಿರುಗುಣವಾಡಿ ಸೇರಿದಂತೆ 20 ಊರುಗಳಲ್ಲಿ ನೀರಿನ ಕೊರತೆ ಇದೆ. ಕೆಲ ಕಡೆ ಹೊಸದಾಗಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ. ಹೀಗಾಗಿ ಅಂತಹ ಕಡೆ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆದಿದೆ. ಸಮಸ್ಯೆ ಪರಿಹಾರ ಮತ್ತು ಅಗತ್ಯ ಅನುದಾನ ಬಿಡುಗಡೆಗಾಗಿ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಗನ್ನಾಥ ಮೂರ್ತಿ ತಿಳಿಸಿದ್ದಾರೆ.