ಸಂಜೀವಿನಿ ಒಕ್ಕೂಟದ ತಾಲ್ಲೂಕು ವ್ಯವಸ್ಥಾಪಕ ಗಣೇಶ್ ಮಾತನಾಡಿ ಸಂಜೀವಿನಿ ಸದಸ್ಯರಿಂದ ಇಂತಹ ಕಾರ್ಯಕ್ರಮಗಳು ತಾಲ್ಲೂಕಿನ ಎಲ್ಲಾ ಕಡೆ ನಡೆಯುತ್ತಿದ್ದು ಸ್ವ ಉದ್ಯೋಗಗಳನ್ನು ಕೈಗೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಲಾಗುತ್ತಿದೆ ಎಂದರು. ಒಕ್ಕೂಟದ ಅಧ್ಯಕ್ಷೆ ಶೈನಾಜ್, ಗ್ರಾಮ ಕರಣಿಕರಾದ ಮೇಘನಾ, ಪಂಚಾಯಿತಿ ಕಾರ್ಯದರ್ಶಿ ಸುಬ್ಬಯ್ಯ ಇದ್ದರು. ಶಶಿಕಲಾ ನಿರೂಪಿಸಿದರು. ಉಮಾವತಿ ವಂದಿಸಿದರು.