ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾನುವಾರ ಉಡುಪಿಯ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಮಾಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು. ನಂತರ ಅಮೃತ್ ಗಾರ್ಡನ್ನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಟ್ಯಾಪ್ಮಿ ವಿಭಾಗ ಆಯೋಜಿಸಿದ್ದ ನಾಯಕತ್ವ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.