ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು: ಟೋಲ್‌ಗೇಟ್‌ಗೆ ಆಂಬುಲೆನ್ಸ್ ಡಿಕ್ಕಿ- ನಾಲ್ವರು ಸಾವು

Last Updated 20 ಜುಲೈ 2022, 16:05 IST
ಅಕ್ಷರ ಗಾತ್ರ

ಬೈಂದೂರು (ಉಡುಪಿ ಜಿಲ್ಲೆ): ಹೊನ್ನಾವರದಿಂದ ಉಡುಪಿ ಜಿಲ್ಲೆಗೆ ರೋಗಿಗಳನ್ನು ಚಿಕಿತ್ಸೆಗೆ ಕರೆತರುತ್ತಿದ್ದ ಆಂಬುಲೆನ್ಸ್‌, ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್‌ ಬಳಿ ಬುಧವಾರ ಭೀಕರ ಅಪಘಾತಕ್ಕೀಡಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಮೃತರ ಹೆಸರು ತಿಳಿದುಬಂದಿಲ್ಲ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬುಲೆನ್ಸ್‌ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು.

ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್‌ ವಾಹನವನ್ನು ಗಮನಿಸಿದ ಟೋಲ್ ಸಿಬ್ಬಂದಿ ರಸ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಆಂಬುಲೆನ್ಸ್‌ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಟೋಲ್ ಕೇಂದ್ರದ ಸಿಬ್ಬಂದಿಗೂ ಗಂಭೀರವಾದ ಗಾಯಗಳಾಗಿವೆ.

ಆಂಬುಲೆನ್ಸ್ ವೇಗವಾಗಿ ಬಂದು ಟೋಲ್‌ಗೆ ಡಿಕ್ಕಿಯಾಗುವ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.

ಅಪಘಾತದಲ್ಲಿ ಮೃತರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಹಡಿನಬಾಳ ಸಮೀಪದ ಹಾಡಗೇರಿಯ ನಿವಾಸಿಗಳು. ಲೋಕೇಶ ಮಾಧವ ನಾಯ್ಕ, ಜ್ಯೋತಿ ಲೋಕೇಶ ನಾಯ್ಕ, ಗಜಾನನ ನಾಯ್ಕ ಮೃತರು. ಅನಾರೋಗ್ಯ ಪೀಡಿತ ಲೋಕೇಶ ಅವರನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆಂಬುಲೆನ್ಸ್ ಚಾಲಕ ರೋಷನ್ ರೋಡ್ರಿಗಸ್ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT