<p><strong>ಕಾರ್ಕಳ (ಉಡುಪಿ)</strong>: ಗೃಹ ಸಚಿವ ಜಿ.ಪರಮೇಶ್ವರ ಮಂಗಳವಾರ ಪತ್ನಿ ಜೊತೆ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾಚಂಡಿಕಾ ಯಾಗದಲ್ಲಿ ಪಾಲ್ಗೊಂಡರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಬಿ.ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾ ಚಂಡಿಕಾಯಾಗ ನಡೆಯಿತು. ಬಳಿಕ ಸಚಿವರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು. </p>.<p>ಇದಕ್ಕೆ ಮುನ್ನ ಸುದ್ದಿಗಾರರ ಜೊತೆಗೆ ಮಾತನಾಡುತ್ತಾ, ‘ಮಂಗಳೂರಲ್ಲಿ ಬುಧವಾರ ಶಾಂತಿ ಸಭೆ ಕರೆದಿದ್ದೇವೆ. ಅದಕ್ಕೆ ಬರುವಾಗ ಹೆಂಡತಿಯೂ ಬರುತ್ತೇನೆ ಎಂದರು. ಬೇಡ ಅನ್ನೋಕಾಗುತ್ತಾ? ದೇವಸ್ಥಾನಕ್ಕೆ ಬಂದಿದ್ದೇನೆ. ಶಾಸ್ತ್ರೋಕ್ತವಾಗಿ ಜನಕಲ್ಯಾಣ, ಲೋಕಕಲ್ಯಾಣಕ್ಕಾಗಿ ಪೂಜೆ ನಡೆಸಿದ್ದೇನೆ’ ಎಂದರು.</p>.<p>‘ಭೇಟಿಯಲ್ಲಿ ವಿಶೇಷತೆ ಏನೂ ಇಲ್ಲ. ಏನೋ ಕೇಳಲು ಬಂದಿದ್ದೇನೆ ಎಂಬ ಕಲ್ಪನೆ ಬೇಡ. 2012 -13ರಲ್ಲಿ ಇಲ್ಲಿಗೆ ಬಂದಿದ್ದೆ. ಪಕ್ಷದ ಅಧ್ಯಕ್ಷನಾಗಿ ಗೆಲುವಿಗೆ ಪ್ರಾರ್ಥಿಸಿದ್ದೆ. 2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿತ್ತು’ ಎಂದು ಹೇಳಿದರು.</p>.<p>‘ಮೂರನೇ ಬಾರಿಗೆ ಗೃಹ ಖಾತೆ ಸಿಕ್ಕಿದ್ದು, ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ. ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ. ತಾವೇ ಐದು ವರ್ಷ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪದೇ ಪದೇ ಆ ಬಗ್ಗೆ ಚರ್ಚೆ ಅನಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ (ಉಡುಪಿ)</strong>: ಗೃಹ ಸಚಿವ ಜಿ.ಪರಮೇಶ್ವರ ಮಂಗಳವಾರ ಪತ್ನಿ ಜೊತೆ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾಚಂಡಿಕಾ ಯಾಗದಲ್ಲಿ ಪಾಲ್ಗೊಂಡರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಬಿ.ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾ ಚಂಡಿಕಾಯಾಗ ನಡೆಯಿತು. ಬಳಿಕ ಸಚಿವರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು. </p>.<p>ಇದಕ್ಕೆ ಮುನ್ನ ಸುದ್ದಿಗಾರರ ಜೊತೆಗೆ ಮಾತನಾಡುತ್ತಾ, ‘ಮಂಗಳೂರಲ್ಲಿ ಬುಧವಾರ ಶಾಂತಿ ಸಭೆ ಕರೆದಿದ್ದೇವೆ. ಅದಕ್ಕೆ ಬರುವಾಗ ಹೆಂಡತಿಯೂ ಬರುತ್ತೇನೆ ಎಂದರು. ಬೇಡ ಅನ್ನೋಕಾಗುತ್ತಾ? ದೇವಸ್ಥಾನಕ್ಕೆ ಬಂದಿದ್ದೇನೆ. ಶಾಸ್ತ್ರೋಕ್ತವಾಗಿ ಜನಕಲ್ಯಾಣ, ಲೋಕಕಲ್ಯಾಣಕ್ಕಾಗಿ ಪೂಜೆ ನಡೆಸಿದ್ದೇನೆ’ ಎಂದರು.</p>.<p>‘ಭೇಟಿಯಲ್ಲಿ ವಿಶೇಷತೆ ಏನೂ ಇಲ್ಲ. ಏನೋ ಕೇಳಲು ಬಂದಿದ್ದೇನೆ ಎಂಬ ಕಲ್ಪನೆ ಬೇಡ. 2012 -13ರಲ್ಲಿ ಇಲ್ಲಿಗೆ ಬಂದಿದ್ದೆ. ಪಕ್ಷದ ಅಧ್ಯಕ್ಷನಾಗಿ ಗೆಲುವಿಗೆ ಪ್ರಾರ್ಥಿಸಿದ್ದೆ. 2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿತ್ತು’ ಎಂದು ಹೇಳಿದರು.</p>.<p>‘ಮೂರನೇ ಬಾರಿಗೆ ಗೃಹ ಖಾತೆ ಸಿಕ್ಕಿದ್ದು, ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ. ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ. ತಾವೇ ಐದು ವರ್ಷ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪದೇ ಪದೇ ಆ ಬಗ್ಗೆ ಚರ್ಚೆ ಅನಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>