<p><strong>ಉಡುಪಿ</strong>: ಗೋವಾದ ಪರ್ಯೆ ಸಮೀಪದ ವಲವಂತಿ ನದಿಯಲ್ಲಿ ಆಕಸ್ಮಿಕವಾಗಿ ಪತ್ತೆಯಾದ ಗಜಲಕ್ಷ್ಮಿ ಶಿಲ್ಪವು ಅಪೂರ್ವವಾದ ವಿಗ್ರಹವಾಗಿದ್ದು, ಚಾರಿತ್ರಿಕ ಮಹತ್ವವನ್ನು ಹೊಂದಿದೆ ಎಂದು ಉಡುಪಿಯ ಆದಿಮ ಕಲಾ ಟ್ರಸ್ಟ್ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.</p>.<p>ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.</p>.<p>ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಆಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಆದಿಮ ಕಲಾ ಟ್ರಸ್ಟ್ ಅಧ್ಯಕ್ಷ ಗೋವಾದ ಡಾ. ರಾಜೇಂದ್ರ ಕೇರ್ಕರ್ ಅವರು ಈ ವಿಗ್ರಹವನ್ನು ಪತ್ತೆಹಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p><strong>ಶಿಲ್ಪದ ಚಾರಿತ್ರಿಕ ಮಹತ್ವ</strong></p><p>ಗೋವಾದ ದೇವರ ಕಾಡುಗಳು ಹಾಗೂ ಕೆಲವು ದೇವಾಲಯಗಳ ಹೊರ ಆವರಣದಲ್ಲಿ ಕೆಲವು ಗಜಲಕ್ಷ್ಮಿ ಶಿಲ್ಪ ಫಲಕಗಳನ್ನು ನಾನು ಗಮನಿಸಿದ್ದೇನೆ ಅದರಲ್ಲಿ ಬಹುತೇಕ ಶಿಲ್ಪಗಳಲ್ಲಿ ಗಜಲಕ್ಷ್ಮಿಯ ಶಿಲ್ಪದ ಜೊತೆಗೆ ಯುದ್ಧದ ಚಿತ್ರಣಗಳು ಇವೆ ಹಾಗೂ ಗಜಲಕ್ಷ್ಮಿಯನ್ನು ಬುಡಕಟ್ಟು ಶೈಲಿಯಲ್ಲಿ ಚಿತ್ರಿಸಲಾಗಿದೆ. ಆದ್ದರಿಂದ ಅವುಗಳು ದೇಶಿ ಶೈಲಿಯ ಗಜಲಕ್ಷ್ಮಿಯ ಶಿಲ್ಪಗಳು. ಆದರೆ ಈಗ ಅಧ್ಯಯನಕ್ಕೆ ಒಳಪಡಿಸಿರುವ ಶಿಲ್ಪವು ಮಾರ್ಗ ಸಂಪ್ರದಾಯಕ್ಕೆ ಸೇರಿದ ಶಿಲ್ಪವಾಗಿದೆ ಎಂದು ಮುರುಗೇಶಿ ಹೇಳಿದ್ದಾರೆ.</p><p>ಗಂಡಭೇರುಂಡದ ಸಾಂಕೇತಿಕ ಚಿತ್ರಣವು ಅತ್ಯಂತ ಸ್ಪಷ್ಟವಾಗಿ ಈ ಶಿಲ್ಪವು ಗೋವಾದ ವೈಷ್ಣವ ಸಂಪ್ರದಾಯಕ್ಕೆ ಸೇರಿದ ಶಿಲ್ಪವೆಂದು ಖಚಿತಪಡಿಸುತ್ತದೆ. ಗಂಡಭೇರುಂಡ ಶಿಲ್ಪವು ಕದಂಬ ವಿಜಯನಗರ ಮೈಸೂರಿನ ಒಡೆಯರ್ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ರಾಜ ಲಾಂಛನವಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಗೋವಾದ ಪರ್ಯೆ ಸಮೀಪದ ವಲವಂತಿ ನದಿಯಲ್ಲಿ ಆಕಸ್ಮಿಕವಾಗಿ ಪತ್ತೆಯಾದ ಗಜಲಕ್ಷ್ಮಿ ಶಿಲ್ಪವು ಅಪೂರ್ವವಾದ ವಿಗ್ರಹವಾಗಿದ್ದು, ಚಾರಿತ್ರಿಕ ಮಹತ್ವವನ್ನು ಹೊಂದಿದೆ ಎಂದು ಉಡುಪಿಯ ಆದಿಮ ಕಲಾ ಟ್ರಸ್ಟ್ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.</p>.<p>ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.</p>.<p>ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಆಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಆದಿಮ ಕಲಾ ಟ್ರಸ್ಟ್ ಅಧ್ಯಕ್ಷ ಗೋವಾದ ಡಾ. ರಾಜೇಂದ್ರ ಕೇರ್ಕರ್ ಅವರು ಈ ವಿಗ್ರಹವನ್ನು ಪತ್ತೆಹಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.<p><strong>ಶಿಲ್ಪದ ಚಾರಿತ್ರಿಕ ಮಹತ್ವ</strong></p><p>ಗೋವಾದ ದೇವರ ಕಾಡುಗಳು ಹಾಗೂ ಕೆಲವು ದೇವಾಲಯಗಳ ಹೊರ ಆವರಣದಲ್ಲಿ ಕೆಲವು ಗಜಲಕ್ಷ್ಮಿ ಶಿಲ್ಪ ಫಲಕಗಳನ್ನು ನಾನು ಗಮನಿಸಿದ್ದೇನೆ ಅದರಲ್ಲಿ ಬಹುತೇಕ ಶಿಲ್ಪಗಳಲ್ಲಿ ಗಜಲಕ್ಷ್ಮಿಯ ಶಿಲ್ಪದ ಜೊತೆಗೆ ಯುದ್ಧದ ಚಿತ್ರಣಗಳು ಇವೆ ಹಾಗೂ ಗಜಲಕ್ಷ್ಮಿಯನ್ನು ಬುಡಕಟ್ಟು ಶೈಲಿಯಲ್ಲಿ ಚಿತ್ರಿಸಲಾಗಿದೆ. ಆದ್ದರಿಂದ ಅವುಗಳು ದೇಶಿ ಶೈಲಿಯ ಗಜಲಕ್ಷ್ಮಿಯ ಶಿಲ್ಪಗಳು. ಆದರೆ ಈಗ ಅಧ್ಯಯನಕ್ಕೆ ಒಳಪಡಿಸಿರುವ ಶಿಲ್ಪವು ಮಾರ್ಗ ಸಂಪ್ರದಾಯಕ್ಕೆ ಸೇರಿದ ಶಿಲ್ಪವಾಗಿದೆ ಎಂದು ಮುರುಗೇಶಿ ಹೇಳಿದ್ದಾರೆ.</p><p>ಗಂಡಭೇರುಂಡದ ಸಾಂಕೇತಿಕ ಚಿತ್ರಣವು ಅತ್ಯಂತ ಸ್ಪಷ್ಟವಾಗಿ ಈ ಶಿಲ್ಪವು ಗೋವಾದ ವೈಷ್ಣವ ಸಂಪ್ರದಾಯಕ್ಕೆ ಸೇರಿದ ಶಿಲ್ಪವೆಂದು ಖಚಿತಪಡಿಸುತ್ತದೆ. ಗಂಡಭೇರುಂಡ ಶಿಲ್ಪವು ಕದಂಬ ವಿಜಯನಗರ ಮೈಸೂರಿನ ಒಡೆಯರ್ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ರಾಜ ಲಾಂಛನವಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>