ಪಡುಬಿದ್ರಿ: ಗಣೇಶ ಚತುರ್ಥಿಯಂದು ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ವಿಜಯದಶಮಿ ದಿನವಾದ ಶುಕ್ರವಾರ ವೈಭವಯುತವಾಗಿ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು.
ಐತಿಹಾಸಿಕ ಹಿನ್ನಲೆಯುಳ್ಳ ಪಡುಬಿದ್ರಿ ಬಾಲಗಣೇಶ ದೇವಸ್ಥಾನ ದಲ್ಲಿ ಗಣೇಶ ಚತುರ್ಥಿಯ ದಿನವಾದ ಸೆಪ್ಟಂಬರ್ 10ರಂದು ಪ್ರತಿಷ್ಠಾಪನೆಗೊಂಡ ಗಣಪತಿಯನ್ನು ನವರಾತ್ರಿಯವರೆಗೆ 46 ದಿನ ಪೂಜಿಸಲಾಗುತ್ತದೆ.
ಭಕ್ತರು ಇಷ್ಟಾರ್ಥ ಈಡೇರಿಕೆಗಾಗಿ ಹರಕೆಯ ರೂಪದಲ್ಲಿ ರಂಗಪೂಜೆ ಸಲ್ಲಿಸುವುದು ಇಲ್ಲಿನ ವಿಶೇಷತೆಯಾಗಿದೆ.
ಕಳೆದ ಬಾರಿ ಕೋವಿಡ್ ಕಾರಣದಿಂದ ಸರಳವಾಗಿ ಪೂಜೆ ನಡೆದಿತ್ತು. ಈ ಬಾರಿಯೂ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ರಂಗಪೂಜೆ ಕಾರ್ಯಗಳು ನಡೆದವು. ಸಂಜೆ ಮಹಾಪೂಜೆ ಬಳಿಕ ಗಣೇಶ ಮೂರ್ತಿಯನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು.
ಶೋಭಾಯಾತ್ರೆಯಲ್ಲಿ ಕೊಂಬು, ವಾದ್ಯ, ಭಜನೆ ಸಹಿತ ವಿವಿಧ ವೇಷಗಳು ಗಮನ ಸೆಳೆದವು.