<p><strong>ಉಡುಪಿ:</strong> ಕೋವಿಡ್–19 ಕಠಿಣ ನಿರ್ಬಂಧಗಳ ನಡುವೆಯೂ ಜಿಲ್ಲೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮಾರುಕಟ್ಟೆಯಲ್ಲಿ ಹೂ, ಹಣ್ಣಿನ ವ್ಯಾಪಾರ ಜೋರಾಗಿದೆ. ಹಬ್ಬದ ವಿಶೇಷವಾಗಿ ಸಾರ್ವಜನಿಕರು ಕಬ್ಬು ಖರೀದಿಸುತ್ತಿದ್ದ ದೃಶ್ಯ ಗುರುವಾರ ಹಲವೆಡೆ ಕಂಡುಬಂತು.</p>.<p>ಹಲವು ಸಂಘ–ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ವೇದಿಕೆ ಸಜ್ಜುಗೊಳಿಸಿವೆ. ಮಂಟಪವನ್ನು ಬಣ್ಣಗಳಿಂದ ಅಲಂಕೃತಗೊಳಿಸಲಾಗಿದೆ. ಈ ಬಾರಿ ದೊಡ್ಡ ಗಾತ್ರದ ಬದಲಾಗಿ ಸಣ್ಣ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಸಾರ್ವಜನಿಕರು ಹೆಚ್ಚು ಒಲವು ತೋರುತ್ತಿರುವುದು ಕಂಡುಬಂತು.</p>.<p>ಗಡ್ಡೆಅಂಗಡಿ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವ ಸೆ.10ರಿಂದ 13ರವರೆಗೆ ನಡೆಯಲಿದ್ದು, ಅಲೆವೂರು ಗಣೇಶ ಗುಡಿಯಲ್ಲಿ ಧಾರ್ಮಿಕ ಕಾರ್ಯಕ್ರಮಳನ್ನು ಆಯೋಜಿಸಲಾಗಿದೆ. ಸೆ.10ರಂದು ₹ 10 ಲಕ್ಷ ಮೌಲ್ಯದ ನಿತ್ಯಪೂಜಿತ ಗಣಪನಿಗೆ ಸ್ವರ್ಣಕವಚ ಸಮರ್ಪಣೆ ನಡೆಯಲಿದೆ. ಪ್ರತಿ ದಿನ ಮಧ್ಯಾಹ್ನ 1ಕ್ಕೆ ಭಜನೆ ಹಾಗೂ ರಾತ್ರಿ 7ಕ್ಕೆ ಮಹಾಪೂಜೆ ನಡೆಯಲಿದೆ.</p>.<p>ಕಿದಿಯೂರು ಭಂಡಾರ್ಕರ್ ಫ್ಯಾಮಿಲಿ ಟ್ರಸ್ಟ್ನಿಂದ ಗುರುವಾರ ಸಾಮೂಹಿಕ ಗೌರಿ ಪೂಜೆ ಕಿದಿಯೂರಿನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೋವಿಡ್–19 ಕಠಿಣ ನಿರ್ಬಂಧಗಳ ನಡುವೆಯೂ ಜಿಲ್ಲೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮಾರುಕಟ್ಟೆಯಲ್ಲಿ ಹೂ, ಹಣ್ಣಿನ ವ್ಯಾಪಾರ ಜೋರಾಗಿದೆ. ಹಬ್ಬದ ವಿಶೇಷವಾಗಿ ಸಾರ್ವಜನಿಕರು ಕಬ್ಬು ಖರೀದಿಸುತ್ತಿದ್ದ ದೃಶ್ಯ ಗುರುವಾರ ಹಲವೆಡೆ ಕಂಡುಬಂತು.</p>.<p>ಹಲವು ಸಂಘ–ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆಗೆ ವೇದಿಕೆ ಸಜ್ಜುಗೊಳಿಸಿವೆ. ಮಂಟಪವನ್ನು ಬಣ್ಣಗಳಿಂದ ಅಲಂಕೃತಗೊಳಿಸಲಾಗಿದೆ. ಈ ಬಾರಿ ದೊಡ್ಡ ಗಾತ್ರದ ಬದಲಾಗಿ ಸಣ್ಣ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಸಾರ್ವಜನಿಕರು ಹೆಚ್ಚು ಒಲವು ತೋರುತ್ತಿರುವುದು ಕಂಡುಬಂತು.</p>.<p>ಗಡ್ಡೆಅಂಗಡಿ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಗಣೇಶೋತ್ಸವ ಸೆ.10ರಿಂದ 13ರವರೆಗೆ ನಡೆಯಲಿದ್ದು, ಅಲೆವೂರು ಗಣೇಶ ಗುಡಿಯಲ್ಲಿ ಧಾರ್ಮಿಕ ಕಾರ್ಯಕ್ರಮಳನ್ನು ಆಯೋಜಿಸಲಾಗಿದೆ. ಸೆ.10ರಂದು ₹ 10 ಲಕ್ಷ ಮೌಲ್ಯದ ನಿತ್ಯಪೂಜಿತ ಗಣಪನಿಗೆ ಸ್ವರ್ಣಕವಚ ಸಮರ್ಪಣೆ ನಡೆಯಲಿದೆ. ಪ್ರತಿ ದಿನ ಮಧ್ಯಾಹ್ನ 1ಕ್ಕೆ ಭಜನೆ ಹಾಗೂ ರಾತ್ರಿ 7ಕ್ಕೆ ಮಹಾಪೂಜೆ ನಡೆಯಲಿದೆ.</p>.<p>ಕಿದಿಯೂರು ಭಂಡಾರ್ಕರ್ ಫ್ಯಾಮಿಲಿ ಟ್ರಸ್ಟ್ನಿಂದ ಗುರುವಾರ ಸಾಮೂಹಿಕ ಗೌರಿ ಪೂಜೆ ಕಿದಿಯೂರಿನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>