<p><strong>ಕುಂದಾಪುರ:</strong> ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಅಗ್ನಿ ಅವಘಡದಲ್ಲಿ ನಷ್ಟಕ್ಕೆ ಒಳಗಾದವರಿಗೆ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.</p>.<p>ನ. 13ರಂದು ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ 8 ಪರ್ಸಿನ್ ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿಯಾಗಿve. 2 ಡಿಂಗಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿರುವ ಮೀನುಗಾರರು ಅವಘಡದಿಂದ ಆಘಾತ ಹೊಂದಿದ್ದಾರೆ. ಆದ್ದರಿಂದ ಹಾನಿಗೊಳಗಾದ ದೋಣಿಗಳಿಗೆ ಕೂಡಲೇ ₹10 ಕೋಟಿ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.</p>.<p>ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಅಗ್ನಿ ಅವಘಡದಲ್ಲಿ ನಷ್ಟಕ್ಕೆ ಒಳಗಾದವರಿಗೆ ತುರ್ತು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.</p>.<p>ನ. 13ರಂದು ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ 8 ಪರ್ಸಿನ್ ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿಯಾಗಿve. 2 ಡಿಂಗಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿರುವ ಮೀನುಗಾರರು ಅವಘಡದಿಂದ ಆಘಾತ ಹೊಂದಿದ್ದಾರೆ. ಆದ್ದರಿಂದ ಹಾನಿಗೊಳಗಾದ ದೋಣಿಗಳಿಗೆ ಕೂಡಲೇ ₹10 ಕೋಟಿ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.</p>.<p>ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>