ನ. 13ರಂದು ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ 8 ಪರ್ಸಿನ್ ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿಯಾಗಿve. 2 ಡಿಂಗಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿರುವ ಮೀನುಗಾರರು ಅವಘಡದಿಂದ ಆಘಾತ ಹೊಂದಿದ್ದಾರೆ. ಆದ್ದರಿಂದ ಹಾನಿಗೊಳಗಾದ ದೋಣಿಗಳಿಗೆ ಕೂಡಲೇ ₹10 ಕೋಟಿ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.