<p><strong>ಕುಂದಾಪುರ (ಉಡುಪಿ):</strong> ಮೀನುಗಾರಿಕೆಗೆ ತೆರೆಳಿದ್ದ ದೋಣಿಯೊಂದು ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಮಂಗಳವಾರ ಮಗುಚಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಒಬ್ಬರನ್ನು ರಕ್ಷಣೆ ಮಾಡಲಾಗಿದೆ.</p><p>ಗಂಗೊಳ್ಳಿಯ ಮೀನುಗಾರರಾದ ಸಿಪಾಯಿ ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಹಾಗೂ ಲೋಹಿತ್ ಖಾರ್ವಿ ನಾಪತ್ತೆಯಾದವರು. </p><p>ದೋಣಿಯಲ್ಲಿದ್ದ ಸಂತೋಷ ಖಾರ್ವಿ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. </p><p>ಮೀನುಗಾರಿಕೆಗೆ ತೆರಳಿದ್ದ ಇವರು ಸಮುದ್ರದಲ್ಲಿ ಭಾರಿ ತೂಫಾನ್ ಎದ್ದ ಪರಿಣಾಮವಾಗಿ ಮೀನುಗಾರಿಕೆ ನಡೆಸದೆ ಹಿಂದಿರುಗುತ್ತಿದ್ದಾಗ ಗಂಗೊಳ್ಳಿ ಅಳಿವೆಯ ಹೊರ ಭಾಗದಲ್ಲಿ ದೋಣಿ ಮಗುಚಿದೆ.</p><p>ಸ್ಥಳೀಯ ಮೀನುಗಾರರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p><p>ಗಾಳಿ ಸಹಿತ ಭಾರಿ ಮಳೆಯಾಗುತ್ತಿರುವುದರಿಂದ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುತ್ತಿದ್ದು, ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಸ್ಥಳೀಯ ಮೀನುಗಾರ ಮುಖಂಡ ರಾಮಪ್ಪ ಖಾರ್ವಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ (ಉಡುಪಿ):</strong> ಮೀನುಗಾರಿಕೆಗೆ ತೆರೆಳಿದ್ದ ದೋಣಿಯೊಂದು ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಮಂಗಳವಾರ ಮಗುಚಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಒಬ್ಬರನ್ನು ರಕ್ಷಣೆ ಮಾಡಲಾಗಿದೆ.</p><p>ಗಂಗೊಳ್ಳಿಯ ಮೀನುಗಾರರಾದ ಸಿಪಾಯಿ ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಹಾಗೂ ಲೋಹಿತ್ ಖಾರ್ವಿ ನಾಪತ್ತೆಯಾದವರು. </p><p>ದೋಣಿಯಲ್ಲಿದ್ದ ಸಂತೋಷ ಖಾರ್ವಿ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. </p><p>ಮೀನುಗಾರಿಕೆಗೆ ತೆರಳಿದ್ದ ಇವರು ಸಮುದ್ರದಲ್ಲಿ ಭಾರಿ ತೂಫಾನ್ ಎದ್ದ ಪರಿಣಾಮವಾಗಿ ಮೀನುಗಾರಿಕೆ ನಡೆಸದೆ ಹಿಂದಿರುಗುತ್ತಿದ್ದಾಗ ಗಂಗೊಳ್ಳಿ ಅಳಿವೆಯ ಹೊರ ಭಾಗದಲ್ಲಿ ದೋಣಿ ಮಗುಚಿದೆ.</p><p>ಸ್ಥಳೀಯ ಮೀನುಗಾರರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p><p>ಗಾಳಿ ಸಹಿತ ಭಾರಿ ಮಳೆಯಾಗುತ್ತಿರುವುದರಿಂದ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುತ್ತಿದ್ದು, ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಸ್ಥಳೀಯ ಮೀನುಗಾರ ಮುಖಂಡ ರಾಮಪ್ಪ ಖಾರ್ವಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>