<p><strong>ಉಡುಪಿ</strong>: ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರ ಜಾಗತಿಕ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞ ಮತ್ತು ಗೀತಾ ಜಯಂತಿ ಅಂಗವಾಗಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ಒಂದು ತಿಂಗಳ ಕಾಲ ನಡೆಯಲಿದ್ದು, ಅದರ ಕಾರ್ಯಾಲಯ ಶನಿವಾರ ಉದ್ಘಾಟನೆಗೊಂಡಿತು.</p>.<p>ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಾಲಯವನ್ನು ಉದ್ಘಾಟಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ತತ್ವವನ್ನೇ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ. 28ರಂದು ಶ್ರೀಕೃಷ್ಣನ ದರ್ಶನಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದರು.</p>.<p>ಸುಪ್ರಸಾದ ಶೆಟ್ಟಿ ಸಂಚಾಲಕತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ದಿವಾನ ನಾಗರಾಜಾಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಪ್ರಮೋದ್ ಸಾಗರ್ ರವರೂತ್ ಮಾತನಾಡಿದರು.</p>.<p>ರಮೇಶ ಭಟ್ ಸ್ವಾಗತಿಸಿದರು. ವಿಕ್ರಂ ಕುಂಟಾರ ವಂದಿಸಿದರು. ವಿವಿಧ ಸಂಸ್ಥೆಗಳ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರ ಜಾಗತಿಕ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞ ಮತ್ತು ಗೀತಾ ಜಯಂತಿ ಅಂಗವಾಗಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ಒಂದು ತಿಂಗಳ ಕಾಲ ನಡೆಯಲಿದ್ದು, ಅದರ ಕಾರ್ಯಾಲಯ ಶನಿವಾರ ಉದ್ಘಾಟನೆಗೊಂಡಿತು.</p>.<p>ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಾಲಯವನ್ನು ಉದ್ಘಾಟಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ತತ್ವವನ್ನೇ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ. 28ರಂದು ಶ್ರೀಕೃಷ್ಣನ ದರ್ಶನಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದರು.</p>.<p>ಸುಪ್ರಸಾದ ಶೆಟ್ಟಿ ಸಂಚಾಲಕತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ದಿವಾನ ನಾಗರಾಜಾಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಪ್ರಮೋದ್ ಸಾಗರ್ ರವರೂತ್ ಮಾತನಾಡಿದರು.</p>.<p>ರಮೇಶ ಭಟ್ ಸ್ವಾಗತಿಸಿದರು. ವಿಕ್ರಂ ಕುಂಟಾರ ವಂದಿಸಿದರು. ವಿವಿಧ ಸಂಸ್ಥೆಗಳ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>