ಬುಧವಾರ ಸುಮಾರು 200ಕ್ಕೂ ಅಧಿಕ ಮೀನುಗಾರರು ವಿವಿಧ ತಂಡಗಳಲ್ಲಿ ಹುಡುಕಾಟ ನಡೆಸಿದರು. ಸಂಜೆಯ ವೇಳೆಗೆ ಕಾಲುಸಂಕದಿಂದ ಕೆಳಕ್ಕೆ ಸುಮಾರು 500ಮೀ.ನಷ್ಟು ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ದೊರೆತಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಬೈಂದೂರು ಪೋಲೀಸರ ನೆರವಿನೊಂದಿಗೆ ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಂಡರು. ಬಾಲಕಿಯ ಮನೆಯಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಊರು ಸೂತಕದಲ್ಲಿ ಮುಳುಗಿದೆ.