ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು: ಕವರ್ ಸಹಿತ ಚಾಕ್ಲೆಟ್‌ ನುಂಗಿ ಬಾಲಕಿ ಸಾವು

Last Updated 20 ಜುಲೈ 2022, 11:31 IST
ಅಕ್ಷರ ಗಾತ್ರ

ಬೈಂದೂರು (ಉಡುಪಿ ಜಿಲ್ಲೆ): ತಾಲ್ಲೂಕಿನ ಬಿಜೂರು ಗ್ರಾಮದ ಕಬ್ಸೆಯಲ್ಲಿ ಬುಧವಾರ ಚಾಕ್ಲೆಟ್‌ ಗಂಟಲಿನಲ್ಲಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ.

ಉಪ್ಪುಂದದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸಮನ್ವಿ ಮೃತ ಬಾಲಕಿ. ಬೆಳಿಗ್ಗೆ ಬಾಲಕಿ ಅವಸರದಲ್ಲಿ ಶಾಲಾ ಬಸ್‌ ಹತ್ತಲು ಓಡುವಾಗ ಕವರ್ ಸಹಿತ ಚಾಕ್ಲೆಟ್‌ ಬಾಯಿಗೆ ಹಾಕಿಕೊಂಡಿದ್ದಾಳೆ. ಈ ಸಂದರ್ಭ ಆಕ್ಮಿಕವಾಗಿ ಚಾಕ್ಲೆಟ್‌ ನುಂಗಿದ್ದು ಗಂಟಲಿನಲ್ಲಿ ಸಿಲುಕಿಕೊಂಡಿದೆ. ನಂತರ ಉಸಿರಾಡಲು ಕಷ್ಟವಾಗಿ ಸಮನ್ವಿ ಶಾಲಾ ವಾಹನದ ಬಳಿಯೇ ಕುಸಿದು ಬಿದ್ದಿದ್ದಾಳೆ.

ಕೂಡಲೇ ಪೋಷಕರು, ಶಾಲಾ ವಾಹನದ ಚಾಲಕ ಹಾಗೂ ಸ್ಥಳೀಯರು ಬಾಲಕಿಯನ್ನು ಬೈಂದೂರಿನ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ.

ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಬಾಲಕಿಯ ಸಾವಿಗೆ ಸಂತಾಪ ಸೂಚಿಸಲು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗೆ ಒಂದು ದಿನ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT