<p><strong>ಉಡುಪಿ:</strong> ಹೆಣ್ಣುಮಕ್ಕಳು ಆತ್ಮರಕ್ಷಣೆಗಾಗಿ ಕಳರಿಪಯಟ್ಟು ಕಲಿಯಬೇಕು ಎಂದು ಪದ್ಮಶ್ರೀ ಪುರಸ್ಕೃತ ಕಳರಿಪಯಟ್ಟು ಗುರು ಮೀನಾಕ್ಷಿ ಅಮ್ಮ ಹೇಳಿದರು.</p>.<p>ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಕಳರಿಪಯಟ್ಟು ಆತ್ಮರಕ್ಷಣೆಯ ಕಲೆಯಾಗಿದ್ದು ಮಕ್ಕಳಿಗೆ ಅದನ್ನು ಕಲಿಸಬೇಕು. ಅದು ಮಕ್ಕಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸುತ್ತದೆ ಎಂದರು.</p>.<p>ಹಿಂದೆ ಕಳರಿಪಯಟ್ಟು ಕಲೆಯನ್ನು ಒಲಿಸಿಕೊಳ್ಳಲು 13 ವರ್ಷಗಳು ಬೇಕಾಗಿತ್ತು. ಈಗಿನ ಮಕ್ಕಳು ಬೇಗ ಕಲಿಯುತ್ತಿದ್ದಾರೆ ಎಂದು ಹೇಳಿದರು.</p>.<p>ಅದಮಾರು ಮಠಾಧೀಶ ಈಶಪ್ರಿಯತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಉದ್ಯಮಿ ಇನ್ನಾ ರಾಮದಾಸ ಮಡುಮಣ್ಣಾ ಅವರನ್ನು ಗೌರವಿಸಲಾಯಿತು. ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು. ಶ್ರೀಕಾಂತ ಶೆಟ್ಟಿ ಕಾರ್ಕಳ ವಿಶೇಷ ಉಪನ್ಯಾಸ ನೀಡಿದರು.</p>.<p>ಬಳಿಕ ಮೀನಾಕ್ಷಿ ಅಮ್ಮ ಅವರು ಕಳರಿಪಯಟ್ಟು ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ದಿನೇಶನ್ ಕಣ್ಣೂರು ಬಳಗದಿಂದ ಕಳರಿಪಯಟ್ಟು ಪ್ರದರ್ಶನ ನಡೆಯಿತು. ರಾಘವೇಂದ್ರ ರಾವ್ ನಿರೂಪಿಸಿದರು.</p>.<blockquote>ನೋಡುಗರನ್ನು ಚಕಿತಗೊಳಿಸಿದ ಕಳರಿಪಯಟ್ಟು ಪ್ರದರ್ಶನ ಕಳರಿಪಯಟ್ಟು ಪ್ರದರ್ಶಿಸಿದ ಮೀನಾಕ್ಷಿ ಅಮ್ಮ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಹೆಣ್ಣುಮಕ್ಕಳು ಆತ್ಮರಕ್ಷಣೆಗಾಗಿ ಕಳರಿಪಯಟ್ಟು ಕಲಿಯಬೇಕು ಎಂದು ಪದ್ಮಶ್ರೀ ಪುರಸ್ಕೃತ ಕಳರಿಪಯಟ್ಟು ಗುರು ಮೀನಾಕ್ಷಿ ಅಮ್ಮ ಹೇಳಿದರು.</p>.<p>ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಕಳರಿಪಯಟ್ಟು ಆತ್ಮರಕ್ಷಣೆಯ ಕಲೆಯಾಗಿದ್ದು ಮಕ್ಕಳಿಗೆ ಅದನ್ನು ಕಲಿಸಬೇಕು. ಅದು ಮಕ್ಕಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸುತ್ತದೆ ಎಂದರು.</p>.<p>ಹಿಂದೆ ಕಳರಿಪಯಟ್ಟು ಕಲೆಯನ್ನು ಒಲಿಸಿಕೊಳ್ಳಲು 13 ವರ್ಷಗಳು ಬೇಕಾಗಿತ್ತು. ಈಗಿನ ಮಕ್ಕಳು ಬೇಗ ಕಲಿಯುತ್ತಿದ್ದಾರೆ ಎಂದು ಹೇಳಿದರು.</p>.<p>ಅದಮಾರು ಮಠಾಧೀಶ ಈಶಪ್ರಿಯತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಉದ್ಯಮಿ ಇನ್ನಾ ರಾಮದಾಸ ಮಡುಮಣ್ಣಾ ಅವರನ್ನು ಗೌರವಿಸಲಾಯಿತು. ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು. ಶ್ರೀಕಾಂತ ಶೆಟ್ಟಿ ಕಾರ್ಕಳ ವಿಶೇಷ ಉಪನ್ಯಾಸ ನೀಡಿದರು.</p>.<p>ಬಳಿಕ ಮೀನಾಕ್ಷಿ ಅಮ್ಮ ಅವರು ಕಳರಿಪಯಟ್ಟು ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ದಿನೇಶನ್ ಕಣ್ಣೂರು ಬಳಗದಿಂದ ಕಳರಿಪಯಟ್ಟು ಪ್ರದರ್ಶನ ನಡೆಯಿತು. ರಾಘವೇಂದ್ರ ರಾವ್ ನಿರೂಪಿಸಿದರು.</p>.<blockquote>ನೋಡುಗರನ್ನು ಚಕಿತಗೊಳಿಸಿದ ಕಳರಿಪಯಟ್ಟು ಪ್ರದರ್ಶನ ಕಳರಿಪಯಟ್ಟು ಪ್ರದರ್ಶಿಸಿದ ಮೀನಾಕ್ಷಿ ಅಮ್ಮ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>