ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು. ಮನುಷ್ಯ ಎಷ್ಟೇ
ದೊಡ್ಡ ಪದವಿ ಪಡೆದುಕೊಂಡಿದ್ದರೂ, ಜೀವನದಲ್ಲಿ ಉತ್ತಮ ನೈತಿಕ ಮೌಲ್ಯಗಳನ್ನು ಹೊಂದದಿದ್ದಲ್ಲಿ ಆ ಪದವಿಗಳಿಗೆ ಮೌಲ್ಯಗಳಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ ಮೂಲ ಸೌಕರ್ಯಗಳನ್ನೂ ಒದಗಿಸಬೇಕಾಗಿರುವುದು ಇಂದಿನ ಅಗತ್ಯ ಎಂದರು.