ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಉಳಿಸಿ ಅಭಿಯಾನಕ್ಕೆ 23ರಂದು ಕಾಂಗ್ರೆಸ್‌ ಚಾಲನೆ

Last Updated 15 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ದಲಿತರು ಹಾಗೂ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ಪಕ್ಷ ಅದರ ಕುರಿತು ಜನರ ಗಮನ ಸೆಳೆಯುವ ಉದ್ದೇಶದಿಂದ ‘ಸಂವಿಧಾನ ಉಳಿಸಿ’ ಅಭಿಯಾನ ಆರಂಭಿಸಲಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 23ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್‌ನ ಮಾಜಿ ಹಾಗೂ ಹಾಲಿ ದಲಿತ ಶಾಸಕರು, ಜಿಲ್ಲಾ ಪರಿಷತ್‌, ನಗರ ಪಾಲಿಕೆ ಹಾಗೂ ಪಂಚಾಯಿತಿ ಸಮಿತಿಗಳಲ್ಲಿ ಅಧಿಕಾರದಲ್ಲಿರುವವರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ದಲಿತ ಸಮುದಾಯಕ್ಕೆ ಸಂಬಂಧಿಸಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶ. ರಾಜ್ಯಗಳ ಮಟ್ಟದಲ್ಲಿ ಇಂತಹುದೇ ಕಾರ್ಯಕ್ರಮಗಳನ್ನು ನಡೆಸುವ ಮೂಲಕ, ದಲಿತರಿಗೆ ಈ ಅಭಿಯಾನದ ಸಂದೇಶ ರವಾನಿಸಲಾಗುತ್ತದೆ ಎಂದು ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಸಂಘಟಕ ನಿತಿನ್ ರಾವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT