ದಲಿತ ಸಮುದಾಯಕ್ಕೆ ಸಂಬಂಧಿಸಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶ. ರಾಜ್ಯಗಳ ಮಟ್ಟದಲ್ಲಿ ಇಂತಹುದೇ ಕಾರ್ಯಕ್ರಮಗಳನ್ನು ನಡೆಸುವ ಮೂಲಕ, ದಲಿತರಿಗೆ ಈ ಅಭಿಯಾನದ ಸಂದೇಶ ರವಾನಿಸಲಾಗುತ್ತದೆ ಎಂದು ಕಾಂಗ್ರೆಸ್ನ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಸಂಘಟಕ ನಿತಿನ್ ರಾವತ್ ತಿಳಿಸಿದ್ದಾರೆ.