ಡಿ.10ರಂದು ಬ್ರಹ್ಮಾವರದ ಪೇತ್ರಿ ಸೇಂಟ್ ಪೀಟರ್ಸ್ ಚರ್ಚ್ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮೋದ್ ಮಧ್ವರಾಜ್ ಈ ಹೇಳಿಕೆ ನೀಡಿದ್ದರು. ‘ಟಿಪ್ಪು ಸುಲ್ತಾನ್ ಸೈನ್ಯ ಪೇತ್ರಿ ಚರ್ಚ್ ಮೇಲೆ ದಾಳಿ ಮಾಡಿ ನಾಶಮಾಡಿತ್ತು ಎಂಬ ಅಂಶ ಇತಿಹಾಸದಲ್ಲಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದು ಸರಿಯೋ ತಪ್ಪೊ ಗೊತ್ತಿಲ್ಲ. ಆದರೆ, ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿಲ್ಲ’ ಎಂದು ಮಧ್ವರಾಜ್ ಹೇಳಿರುವುದು ವಿಡಿಯೋದಲ್ಲಿದೆ.