ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಧಾಮ’ ಉತ್ಪನ್ನ ಬಿಡುಗಡೆ 30ರಂದು

Last Updated 28 ಅಕ್ಟೋಬರ್ 2022, 8:32 IST
ಅಕ್ಷರ ಗಾತ್ರ

ಹೆಬ್ರಿ: ಸಂಜೀವಿನಿ ಫಾರ್ಮ್‌ ಮತ್ತು ಡೇರಿಯ ಮುನಿಯಾಲು ಗೋಧಾಮದಲ್ಲಿ ಅ.30ರಂದು ಮಧ್ಯಾಹ್ನ 3ಕ್ಕೆ ದೇಸಿ ಗೋವುಗಳ ಹಾಲಿನ ಉತ್ಪನ್ನಗಳ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಮುನಿಯಾಲು ಗೋಧಾಮದ ಸಂಸ್ಥಾಪಕ ಜಿ.ರಾಮಕೃಷ್ಣ ಆಚಾರ್‌ ತಿಳಿಸಿದ್ದಾರೆ.

ಮೂಡಬಿದರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕರು ಮತ್ತು ಸಿ.ಇ.ಒ ಎಂ.ಎಸ್. ಮಹಾಬಲೇಶ್ವರ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಸ್.ಯಡಪಡಿತ್ತಾಯ,
ಬೋಳ ಸುರೇಂದ್ರ ಕಾಮತ್ ಅಂಡ್ ಸನ್ಸ್‌ ಉದ್ಯಮ
ಸಮೂಹದ ವ್ಯವಸ್ಥಾಪಕ ಪಾಲುದಾರ ಬೋಳ
ದಾಮೋದರ್ ಕಾಮತ್, ಮಂಗಳೂರು ಕ್ಯಾಂಪ್ಕೊ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಮಂಗಳೂರಿನ ಲೆಕ್ಕ ಪರಿಶೋಧಕ ಎಸ್.ಎಸ್. ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಪಾಲ್ಗೊಳ್ಳಲಿದ್ದಾರೆ.

ತುಳು ಹಾಗೂ ಕನ್ನಡ ನಟ ದೀಪಕ್ ರೈ ಪಾಣಾಜೆ ಅವರನ್ನು ಸನ್ಮಾನಿಸಲಾಗುವುದು. ಉದ್ಯಮಿ ಬಾರ್ಕೂರಿನ ಶ್ರೀನಿವಾಸ ಶೆಟ್ಟಿಗಾರ್ ದಂಪತಿ ಗೋಪೂಜೆ ನೆರವೇರಿಸಲಿದ್ದಾರೆ ಎಂದು ಜಿ.ರಾಮಕೃಷ್ಣ ಆಚಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT