ಕುಂದಾಪುರ: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಗುರುಗಳಾಗಿ ಮಾರ್ಗದರ್ಶನ ಮಾಡುತ್ತಿದ್ದ ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದ ಸೇರಿರುವ ಸುದ್ದಿಯನ್ನು ಶಿಷ್ಯರಿಗೆ ಅರಗಿಸಿಗೊಳ್ಳಲು ಸಾಧ್ಯವಾಗುತ್ತಿಲ್ಲ. ವಿಷಯ ತಿಳಿದ ಶಿಷ್ಯರು ಮನೆಯಲ್ಲಿ ಗುರುವಿನ ಚಿತ್ರದ ಎದುರು ದೀಪ ಬೆಳಗಿ, ಹರಿ ಭಜನೆ ಮಾಡುತ್ತ ಶೋಕಾಚರಣೆ ಮಾಡುತ್ತಿದ್ದಾರೆ.