ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ

Last Updated 14 ಜುಲೈ 2021, 16:25 IST
ಅಕ್ಷರ ಗಾತ್ರ

ಉಡುಪಿ: ಪ್ರಗತಿ ನಗರ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕಳ್ಳನೊಬ್ಬ ಬೇಬಿಜಾನ್ ಎಂಬುವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾನೆ.

ಬಾಗಲಕೋಟೆ ಮೂಲದ ಬೇಬಿಜಾನ್ ಹೋಟೇಲ್‌ ಹಾಗೂ ಮನೆಗಳಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದು, ಜುಲೈ 12ರಂದು ಉಡುಪಿ ಸಾಯಿ ಲಾಡ್ಜ್‌ನಲ್ಲಿ ಪಾತ್ರೆ ಸ್ವಚ್ಚಮಾಡಿ ರಾತ್ರಿ 10:45ರ ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಕಡೆಯಿಂದ ಪ್ರಗತಿ ನಗರ ಕಡೆಗೆ ಹೋಗುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಸರ ಕಿತ್ತು ಪರಾರಿಯಾಗಿದ್ದಾನೆ.

18 ಗ್ರಾಂ ಚಿನ್ನದ ಸರ ₹ 65,000 ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT