ಉಡುಪಿ: ಪ್ರತಿವರ್ಷ ಷಷ್ಠಿಯಂದು ಶ್ರೀಕೃಷ್ಣಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ನಡೆಯುತ್ತಿದ್ದ ಎಡೆಸ್ನಾನ ಆಚರಣೆಯನ್ನು ಈ ಬಾರಿ ಕೈಬಿಡಲಾಗಿದೆ. ಎಡೆಸ್ನಾನಕ್ಕೆ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.