<p><strong>ಉಡುಪಿ: </strong>ಪ್ರತಿವರ್ಷ ಷಷ್ಠಿಯಂದು ಶ್ರೀಕೃಷ್ಣಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ನಡೆಯುತ್ತಿದ್ದ ಎಡೆಸ್ನಾನ ಆಚರಣೆಯನ್ನು ಈ ಬಾರಿ ಕೈಬಿಡಲಾಗಿದೆ. ಎಡೆಸ್ನಾನಕ್ಕೆ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಎಡೆಸ್ನಾನ ವಿಚಾರದಲ್ಲಿ ಅನಗತ್ಯ ವಿವಾದಗಳು ಬೇಡ ಎಂಬ ಕಾರಣಕ್ಕೆ ಆಚರಣೆಯನ್ನು ಕೈಬಿಡಲಾಗಿದೆ. ಭಕ್ತರು ದೇವರಿಗೆ ಪ್ರದಕ್ಷಿಣೆ ಹಾಕಿ ಅರ್ಚನೆ, ಪೂಜೆ ಸಲ್ಲಿಸಲಿ ಎಂದು ಶ್ರೀಗಳು ಸಲಹೆ ನೀಡಿದರು.</p>.<p>ಪಲಿಮಾರು ಶ್ರೀಗಳ ನಿರ್ಧಾರವನ್ನು ಪೇಜಾವರ ಶ್ರೀಗಳು ಸ್ವಾಗತಿಸಿದ್ದಾರೆ. ಜಾತಿಯ ಹೆಸರಿನಲ್ಲಿ ವಿರೋಧ ಎದುರುದಾರೆ ಅದು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ. ದೇವಸ್ಥಾನದಲ್ಲಿ ಮಡೆಸ್ನಾನ–ಎಡೆಸ್ನಾನ ಮಾಡುವುದು ಅನಿವಾರ್ಯವಲ್ಲ ಎಂದರು.</p>.<p>ದೇವಸ್ಥಾನದ ಉತ್ಸವಗಳು, ಪೂಜೆ ಶಾಸ್ತ್ರಬದ್ಧವಾಗಿ ನಡೆಯಬೇಕಷ್ಟೆ. ವಿವಾದ–ಭಿನ್ನಾಭಿಪ್ರಾಯಕ್ಕೆ ಗುರಿಯಾದ ಆಚರಣೆಗಳು ನಿಂತುಹೋದರೆ ಹಿಂದೂ ಧರ್ಮಕ್ಕೆ ಯಾವುದೇ ನಷ್ಟವಿಲ್ಲ ಎಂದು ಹೇಳಿದರು.</p>.<p>* ತಿನ್ನುವ ಅನ್ನದ ಮೇಲೆ ಉರುಳು ಸೇವೆ ಮಾಡುವುದಕ್ಕೆ ಆಕ್ಷೇಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮತ್ತೆ ವಿವಾದಗಳು ಸೃಷ್ಟಿಯಾಗಬಾರದು ಎಂದು ಆಚರಣೆ ಕೈಬಿಡಲಾಗಿದೆ</p>.<p><em><strong>- ವಿದ್ಯಾಧೀಶ ಶ್ರೀಗಳು, ಪಲಿಮಾರು ಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪ್ರತಿವರ್ಷ ಷಷ್ಠಿಯಂದು ಶ್ರೀಕೃಷ್ಣಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ನಡೆಯುತ್ತಿದ್ದ ಎಡೆಸ್ನಾನ ಆಚರಣೆಯನ್ನು ಈ ಬಾರಿ ಕೈಬಿಡಲಾಗಿದೆ. ಎಡೆಸ್ನಾನಕ್ಕೆ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಎಡೆಸ್ನಾನ ವಿಚಾರದಲ್ಲಿ ಅನಗತ್ಯ ವಿವಾದಗಳು ಬೇಡ ಎಂಬ ಕಾರಣಕ್ಕೆ ಆಚರಣೆಯನ್ನು ಕೈಬಿಡಲಾಗಿದೆ. ಭಕ್ತರು ದೇವರಿಗೆ ಪ್ರದಕ್ಷಿಣೆ ಹಾಕಿ ಅರ್ಚನೆ, ಪೂಜೆ ಸಲ್ಲಿಸಲಿ ಎಂದು ಶ್ರೀಗಳು ಸಲಹೆ ನೀಡಿದರು.</p>.<p>ಪಲಿಮಾರು ಶ್ರೀಗಳ ನಿರ್ಧಾರವನ್ನು ಪೇಜಾವರ ಶ್ರೀಗಳು ಸ್ವಾಗತಿಸಿದ್ದಾರೆ. ಜಾತಿಯ ಹೆಸರಿನಲ್ಲಿ ವಿರೋಧ ಎದುರುದಾರೆ ಅದು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ. ದೇವಸ್ಥಾನದಲ್ಲಿ ಮಡೆಸ್ನಾನ–ಎಡೆಸ್ನಾನ ಮಾಡುವುದು ಅನಿವಾರ್ಯವಲ್ಲ ಎಂದರು.</p>.<p>ದೇವಸ್ಥಾನದ ಉತ್ಸವಗಳು, ಪೂಜೆ ಶಾಸ್ತ್ರಬದ್ಧವಾಗಿ ನಡೆಯಬೇಕಷ್ಟೆ. ವಿವಾದ–ಭಿನ್ನಾಭಿಪ್ರಾಯಕ್ಕೆ ಗುರಿಯಾದ ಆಚರಣೆಗಳು ನಿಂತುಹೋದರೆ ಹಿಂದೂ ಧರ್ಮಕ್ಕೆ ಯಾವುದೇ ನಷ್ಟವಿಲ್ಲ ಎಂದು ಹೇಳಿದರು.</p>.<p>* ತಿನ್ನುವ ಅನ್ನದ ಮೇಲೆ ಉರುಳು ಸೇವೆ ಮಾಡುವುದಕ್ಕೆ ಆಕ್ಷೇಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮತ್ತೆ ವಿವಾದಗಳು ಸೃಷ್ಟಿಯಾಗಬಾರದು ಎಂದು ಆಚರಣೆ ಕೈಬಿಡಲಾಗಿದೆ</p>.<p><em><strong>- ವಿದ್ಯಾಧೀಶ ಶ್ರೀಗಳು, ಪಲಿಮಾರು ಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>