ಬೈಂದೂರು ತಾಲ್ಲೂಕಿನ ನಾಡದಲ್ಲಿ ದುಶ್ಚಟ ಇಲ್ಲದ ಚಂದ್ರ ಕೊರಗ ಕರಳು ಸಂಬಂಧಿ ಕಾಯಿಲೆ, ಕಿಡ್ನಿ ವೈಫಲ್ಯ, ರಕ್ತ ಹೀನತೆ, ಕಾಮಾಲೆ, ಮಧುಮೇಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರಗರು ದುಶ್ಚಟಗಳಿಂದಲೇ ಕಾಯಿಲೆಗಳಿಗೆ ತುತ್ತಾಗಿ ಮೃತಪಡುತ್ತಿದ್ದಾರೆ ಎಂಬುದು ಆಧಾರ ರಹಿತ ಹಾಗೂ ಅವೈಜ್ಞಾನಿಕ.