<p><strong>ಉಡುಪಿ: </strong>ಪ್ರಸಕ್ತ ಸಾಲಿನರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಹಿರಿಯ ಪುರಾತತ್ವ ಶಾಸ್ತ್ರಜ್ಞ ಹಾಗೂ ಇತಿಹಾಸಕಾರ ಪ್ರೊ.ಅ.ಸುಂದರ ಅವರಿಗೆ ಸಂದಿದೆ.</p>.<p>ಮಾರ್ಚ್ 23ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಗೃಹದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ.</p>.<p>ಮಣಿಪಾಲ ಗ್ಲೋಬಲ್ ಸಂಸ್ಥೆ ಮುಖ್ಯಸ್ಥ ಟಿ.ವಿ. ಮೋಹನದಾಸ ಪೈ ಅವರು ತಾಯಿ ವಿಮಲಾ ಪೈ ಹೆಸರಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಯು ₹ 1 ಲಕ್ಷ ಒಳಗೊಂಡಿದೆ.</p>.<p>ಉಡುಪಿ ಸಮೀಪದ ನೀಲಾವರದ ಪ್ರೊ.ಅ.ಸುಂದರ ಪುರಾತತ್ವ ಇಲಾಖೆಯಲ್ಲಿ ಬಹುಕಾಲ ದುಡಿದಿದ್ದು, ಧಾರವಾಡದ ಕರ್ನಾಟಕ ವಿವಿ ಪ್ರಾಚೀನ ಭಾರತೀಯ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ.</p>.<p>ಬಿಜಾಪುರದ ಸ್ನಾತಕೋತ್ತರ ವಿಭಾಗದ ನಿರ್ದೇಶಕರಾಗಿ, ಮೈಸೂರು ವಿ.ವಿಯ ಝಾಕಿರ್ ಹುಸೇನ್ ಪೀಠದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಉತ್ಖನನಗಳನ್ನು ನಡೆಸಿದ್ದು, ಸಾಂಸ್ಕೃತಿಕ ಪರಂಪರೆಯ ರಕ್ಷಣೆಗೆ ಮುತುವರ್ಜಿ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪ್ರಸಕ್ತ ಸಾಲಿನರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಹಿರಿಯ ಪುರಾತತ್ವ ಶಾಸ್ತ್ರಜ್ಞ ಹಾಗೂ ಇತಿಹಾಸಕಾರ ಪ್ರೊ.ಅ.ಸುಂದರ ಅವರಿಗೆ ಸಂದಿದೆ.</p>.<p>ಮಾರ್ಚ್ 23ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಗೃಹದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ತಿಳಿಸಿದ್ದಾರೆ.</p>.<p>ಮಣಿಪಾಲ ಗ್ಲೋಬಲ್ ಸಂಸ್ಥೆ ಮುಖ್ಯಸ್ಥ ಟಿ.ವಿ. ಮೋಹನದಾಸ ಪೈ ಅವರು ತಾಯಿ ವಿಮಲಾ ಪೈ ಹೆಸರಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಯು ₹ 1 ಲಕ್ಷ ಒಳಗೊಂಡಿದೆ.</p>.<p>ಉಡುಪಿ ಸಮೀಪದ ನೀಲಾವರದ ಪ್ರೊ.ಅ.ಸುಂದರ ಪುರಾತತ್ವ ಇಲಾಖೆಯಲ್ಲಿ ಬಹುಕಾಲ ದುಡಿದಿದ್ದು, ಧಾರವಾಡದ ಕರ್ನಾಟಕ ವಿವಿ ಪ್ರಾಚೀನ ಭಾರತೀಯ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ.</p>.<p>ಬಿಜಾಪುರದ ಸ್ನಾತಕೋತ್ತರ ವಿಭಾಗದ ನಿರ್ದೇಶಕರಾಗಿ, ಮೈಸೂರು ವಿ.ವಿಯ ಝಾಕಿರ್ ಹುಸೇನ್ ಪೀಠದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಉತ್ಖನನಗಳನ್ನು ನಡೆಸಿದ್ದು, ಸಾಂಸ್ಕೃತಿಕ ಪರಂಪರೆಯ ರಕ್ಷಣೆಗೆ ಮುತುವರ್ಜಿ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>