<p><strong>ಉಡುಪಿ: </strong>ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಮುಂದುವರಿದಿರುವುದರಿಂದ ಸೆಪ್ಟೆಂಬರ್ನಲ್ಲಿ ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕಾಗಿ, ದುರಸ್ತಿ ಕಾರ್ಯಕ್ಕೆ, ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಆ.7, 2020 ಆದೇಶದನ್ವಯ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.</p>.<p>ಪ್ರವಾಹ ಬಾಧಿತ ಸಂತ್ರಸ್ತರ ಬಟ್ಟೆ–ಬರೆ ದಿನಬಳಕೆಯ ವಸ್ತುಗಳ ಖರೀದಿಗೆ ಕೇಂದ್ರಸರ್ಕಾರ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪ್ರತಿ ಕುಟುಂಬಕ್ಕೆ ₹ 3,800 ನಿಗದಿಪಡಿಸಿತ್ತು. ಇದರ ಜತೆಗೆ ರಾಜ್ಯ ಸರ್ಕಾರ ₹ 6,200 ಸೇರಿಸಿ ಒಟ್ಟು 10,000 ಕ್ಕೇರಿಸಿದೆ.</p>.<p>ನೆರೆಯಿಂದ ಶೇ 75ಕ್ಕಿಂತ ಹೆಚ್ಚು ಅಥವಾ ಪೂರ್ಣ ಮನೆ ಕುಸಿದಿದ್ದರೆ ಕೇಂದ್ರದ ಮಾರ್ಗಸೂಚಿ ದರ ₹ 95,100 ಬದಲಾಗಿ ಸಂತ್ರಸ್ತರಿಗೆ ₹ 5 ಲಕ್ಷ ಸಿಗಲಿದೆ. ಶೇ 25 ರಿಂದ 75ರಷ್ಟು ಹಾನಿಯಾಗಿದ್ದರೆ ಮನೆ ಕೆಡವಿ ಹೊಸದಾಗಿ ನಿರ್ಮಿಸಲು ₹ 5 ಲಕ್ಷ ದೊರೆಯಲಿದೆ. ಶೇ 25 ರಿಂದ 75ರಷ್ಟು ಭಾಗಶಃ ಹಾನಿಗೆ ₹ 3 ಲಕ್ಷ ಹಾಗೂ ಶೇ 15 ರಿಂದ 25ರಷ್ಟು ಅಲ್ಪಸ್ವಲ್ಪ ಪ್ರಮಾಣದ ಹಾನಿಯಾಗಿದ್ದರೆ ₹ 50,000 ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈಚೆಗೆ ಉಡುಪಿಯಲ್ಲಿ ಸುರಿದ ಮಹಾಮಳೆಗೆ ನೂರಾರು ಮನೆಗಳಿಗೆ ಹಾನಿಯಾಗಿತ್ತು. ಸರ್ಕಾರದ ನೆರೆ ಪರಿಹಾರ ಮಾರ್ಗಸೂಚಿ ಆಗಸ್ಟ್ ತಿಂಗಳಿಗೆ ಅಂತ್ಯವಾಗಿದ್ದರಿಂದ, ಸೆಪ್ಟೆಂಬರ್ನಲ್ಲಿ ನೆರೆಹಾನಿಯಿಂದ ಮನೆ ಕಳೆದುಕೊಂಡವರಿಗೆ ಗರಿಷ್ಠ ₹ 95,100 ಮಾತ್ರ ಪರಿಹಾರ ಸಿಗುವಂತಾಗಿತ್ತು. ಹಳೆಯ ನೆರೆ ಪರಿಹಾರ ಆದೇಶವನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಂದಾಯ ಸಚಿವರಿಗೆ ಮಾಡಿದ ಮನವಿಗೆ ಸ್ಪಂದನ ಸಿಕ್ಕಿದ್ದು, ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಗರಿಷ್ಠ ₹ 5ಲಕ್ಷದವವರೆಗೆ ಪರಿಹಾರ ಸಿಗಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಮುಂದುವರಿದಿರುವುದರಿಂದ ಸೆಪ್ಟೆಂಬರ್ನಲ್ಲಿ ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕಾಗಿ, ದುರಸ್ತಿ ಕಾರ್ಯಕ್ಕೆ, ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಆ.7, 2020 ಆದೇಶದನ್ವಯ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.</p>.<p>ಪ್ರವಾಹ ಬಾಧಿತ ಸಂತ್ರಸ್ತರ ಬಟ್ಟೆ–ಬರೆ ದಿನಬಳಕೆಯ ವಸ್ತುಗಳ ಖರೀದಿಗೆ ಕೇಂದ್ರಸರ್ಕಾರ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪ್ರತಿ ಕುಟುಂಬಕ್ಕೆ ₹ 3,800 ನಿಗದಿಪಡಿಸಿತ್ತು. ಇದರ ಜತೆಗೆ ರಾಜ್ಯ ಸರ್ಕಾರ ₹ 6,200 ಸೇರಿಸಿ ಒಟ್ಟು 10,000 ಕ್ಕೇರಿಸಿದೆ.</p>.<p>ನೆರೆಯಿಂದ ಶೇ 75ಕ್ಕಿಂತ ಹೆಚ್ಚು ಅಥವಾ ಪೂರ್ಣ ಮನೆ ಕುಸಿದಿದ್ದರೆ ಕೇಂದ್ರದ ಮಾರ್ಗಸೂಚಿ ದರ ₹ 95,100 ಬದಲಾಗಿ ಸಂತ್ರಸ್ತರಿಗೆ ₹ 5 ಲಕ್ಷ ಸಿಗಲಿದೆ. ಶೇ 25 ರಿಂದ 75ರಷ್ಟು ಹಾನಿಯಾಗಿದ್ದರೆ ಮನೆ ಕೆಡವಿ ಹೊಸದಾಗಿ ನಿರ್ಮಿಸಲು ₹ 5 ಲಕ್ಷ ದೊರೆಯಲಿದೆ. ಶೇ 25 ರಿಂದ 75ರಷ್ಟು ಭಾಗಶಃ ಹಾನಿಗೆ ₹ 3 ಲಕ್ಷ ಹಾಗೂ ಶೇ 15 ರಿಂದ 25ರಷ್ಟು ಅಲ್ಪಸ್ವಲ್ಪ ಪ್ರಮಾಣದ ಹಾನಿಯಾಗಿದ್ದರೆ ₹ 50,000 ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಈಚೆಗೆ ಉಡುಪಿಯಲ್ಲಿ ಸುರಿದ ಮಹಾಮಳೆಗೆ ನೂರಾರು ಮನೆಗಳಿಗೆ ಹಾನಿಯಾಗಿತ್ತು. ಸರ್ಕಾರದ ನೆರೆ ಪರಿಹಾರ ಮಾರ್ಗಸೂಚಿ ಆಗಸ್ಟ್ ತಿಂಗಳಿಗೆ ಅಂತ್ಯವಾಗಿದ್ದರಿಂದ, ಸೆಪ್ಟೆಂಬರ್ನಲ್ಲಿ ನೆರೆಹಾನಿಯಿಂದ ಮನೆ ಕಳೆದುಕೊಂಡವರಿಗೆ ಗರಿಷ್ಠ ₹ 95,100 ಮಾತ್ರ ಪರಿಹಾರ ಸಿಗುವಂತಾಗಿತ್ತು. ಹಳೆಯ ನೆರೆ ಪರಿಹಾರ ಆದೇಶವನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಂದಾಯ ಸಚಿವರಿಗೆ ಮಾಡಿದ ಮನವಿಗೆ ಸ್ಪಂದನ ಸಿಕ್ಕಿದ್ದು, ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಗರಿಷ್ಠ ₹ 5ಲಕ್ಷದವವರೆಗೆ ಪರಿಹಾರ ಸಿಗಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>