ಬ್ರಹ್ಮಾವರ: ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ. ಮುಂದೇನು ಎಂಬ ಬಗ್ಗೆ ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕು ವ್ಯಾಪ್ತಿಯಲ್ಲಿರುವ ಸರ್ಕಾರಿ ಕ್ವಾರಂಟೈನ್ ಕೇಂದ್ರಗಳು, ಶಿರೂರು ಟೋಲ್ಗೇಟ್ನಲ್ಲಿರುವ ಚೆಕ್ಪೋಸ್ಟ್ನಲ್ಲಿ ಶನಿವಾರ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು
ಕೊರೊನಾ ಕಾರಣ ಚುನಾವಣೆ ಮುಂದೂಡಬಹುದು. ಪರ್ಯಾಯವಾಗಿ ಈಗಿನ ಸದಸ್ಯರನ್ನು ಚುನಾವಣೆ ತನಕ ಮುಂದುವರಿಸುವ, ಆಡಳಿತಾಧಿಕಾರಿ ಅಥವಾ ಸಮಿತಿ ರಚಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳು ಹಾಗೂ ಪಂಚಾಯತ್ ರಾಜ್ ಸಚಿವರು ಶೀಘ್ರ ನಿರ್ಧಾರ ತೆಗೆದುಕೊಳ್ಳುವರು ಎಂದು ಅವರು ಹೇಳಿದರು.