<p><strong>ಬ್ರಹ್ಮಾವರ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ ₹150 ಕೋಟಿ ಅನುದಾನ ಫಲಾನುಭವಿಗಳಿಗೆ ಲಭ್ಯವಾಗಿದೆ ಎಂದು ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಹೇಳಿದರು.</p>.<p>ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗೃಹಜ್ಯೋತಿ ಯೋಜನೆಯೂ ಸೇರಿದಂತೆ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಲು ಪ್ರತೀ ಹಂತದಲ್ಲೂ ಅವಕಾಶವಿರುವುದರಿಂದ ಮತ್ತು ನೇರ ವರ್ಗಾವಣೆ ವ್ಯವಸ್ಥೆ ಇರುವುದರಿಂದ ನಾಗರಿಕರಿಗೆ ಯಶಸ್ವಿಯಾಗಿ ತಲುಪುತ್ತಿವೆ ಎಂದು ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ಸಂಸ್ಥೆಯ ಬಸ್ಗಳ ಸೌಲಭ್ಯ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿದ್ದು, ಇನ್ನೂ ಈ ಸೌಲಭ್ಯ ತಲುಪದಿರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಗ್ಯಾರಂಟಿ ಯೋಜನೆಗಳ ಯಶೋಗಾಥೆಗಳನ್ನು ಸಂಕಲಿಸಲಾಗುತ್ತಿದ್ದು, ಸಂಬಂಧಿಸಿದ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸಮಿತಿಯ ಸದಸ್ಯೆ ರೇಖಾ ಸುವರ್ಣ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಸೌಲಭ್ಯದಿಂದ ವಂಚಿತವಾಗಿರುವ ಫಲಾನುಭವಿಗಳಿಗೆ ಇಲಾಖಾ ಹಂತದಲ್ಲಿ ಶೀಘ್ರವಾಗಿ ಸ್ಪಂದಿಸುವುದರೊಂದಿಗೆ ವೈಯಕ್ತಿಕ ಆದ್ಯತೆ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉತ್ತರಿಸಿ, ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ನೀಡುವುದರೊಂದಿಗೆ ತಂತ್ರಾಂಶದ ಮೂಲಕ ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಮಿತಿ ಸದಸ್ಯ ರಮೇಶ ತಿಂಗಳಾಯ ಮಾತನಾಡಿ, ಹೂಡೆ ಭಾಗಕ್ಕೆ ನಿರಂತರ ಅಗ್ರಹದ ಕಾರಣ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯವನ್ನು ಒದಗಿಸಲಾಗಿದ್ದರೂ ಆ ಭಾಗದ ನಾಗರಿಕರಿಗೆ ಸಂಜೆಯ ಅವಧಿಯಲ್ಲಿ ಅನುಕೂಲವಾಗುವ ಸಮಯ ನಿಗದಿಯಾಗದಿರುವ ಕಾರಣ ಮತ್ತೊಮ್ಮೆ ಈ ಕುರಿತು ಆಗ್ರಹಿಸುವ ಸಂದರ್ಭ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ದ್ವನಿಗೂಡಿಸಿದ ಸದಸ್ಯ ಶ್ರೀಕಾಂತ ಆಚಾರ್ಯ, ಸಾರಿಗೆ ಸಂಸ್ಥೆಯ ಸ್ಥಳೀಯ ಬಸ್ಗಳು ಈ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಸರ್ವಿಸ್ ರಸ್ತೆಯಲ್ಲಿ ಚಲಿಸುವಂತೆ ಮತ್ತು ನಿಗದಿತ ಸಮಯದಲ್ಲಿ ನಿಯಮಿತ ನಿಲ್ದಾಣಗಳಿಗೆ ಕಡ್ಡಾಯವಾಗಿ ತಲುಪುವಂತೆ ಕ್ರಮ ವಹಿಸಲು ಹಲವು ಸಭೆಗಳಲ್ಲಿ ಮನವಿ ಮಾಡಿದ್ದರೂ ಇನ್ನೂ ಸುಧಾರಣೆ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಹಂತದ ಸಭೆಗಳಲ್ಲಿ ತಾವು ಈಗಾಗಲೇ ಈ ಕುರಿತು ಪ್ರಸ್ತಾಪಿಸಿದ್ದು, ಆದ್ಯತೆ ನೀಡಿ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷರು ತಿಳಿಸಿದರು.</p>.<p>ಯುವನಿಧಿ ಯೋಜನೆ ಅನುಷ್ಠಾನ ಸಂಬಂಧ ತಾಲ್ಲೂಕು ಹಂತದಲ್ಲಿ ಫಲಾನುಭವಿಗಳ ನೋಂದಣಿಯ ಪ್ರಮಾಣ ಕಡಿಮೆಯಿದ್ದು, ಸಂಬಂಧಿಸಿದ ಇಲಾಖೆಯ ಮೂಲಕ ಕಾಲೇಜುಗಳಲ್ಲಿ ಈ ಕುರಿತು ಮಾಹಿತಿ ಕಾರ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಹಮ್ಮಿಕೊಳ್ಳುವುದು ಅಗತ್ಯ ಎಂದು ಸಮಿತಿಯ ಸದಸ್ಯರು ಆಗ್ರಹಿಸಿದರು.</p>.<p>ಗ್ಯಾರಂಟಿ ಸಮಿತಿಯ ಸದಸ್ಯರಾದ ಗೋಪಿನಾಯ್ಕ, ರಾಮಕೃಷ್ಣ, ಸುರೇಶ ಪೂಜಾರಿ, ದಿವಾಕರ ಗಾಣಿಗ, ಶ್ರೀನಿವಾಸ ವಡ್ದರ್ಸೆ ಮತ್ತಿತರರು ಮಾತನಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ, ಆಹಾರ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳು ಮಾಸಿಕ ಪ್ರಗತಿಯ ವಿವರ ಮಂಡಿಸಿದರು.</p>.<p>ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಇಒ ಎಚ್.ವಿ ಇಬ್ರಾಹಿಂಪುರ, ಸಹಾಯಕ ಲೆಕ್ಕಾಧಿಕಾರಿ ಮೆಲ್ವಿನ್ ಬಾಂಜಿ, ಸಹಾಯಕ ನಿರ್ದೇಶಕ ಮಹೇಶ ಕೆ., ಸುಧಾಕರ ಶೆಟ್ಟಿ, ಯೋಜನಾಧಿಕಾರಿ ಸಂದೇಶ ಶೆಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ ₹150 ಕೋಟಿ ಅನುದಾನ ಫಲಾನುಭವಿಗಳಿಗೆ ಲಭ್ಯವಾಗಿದೆ ಎಂದು ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಹೇಳಿದರು.</p>.<p>ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗೃಹಜ್ಯೋತಿ ಯೋಜನೆಯೂ ಸೇರಿದಂತೆ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಲು ಪ್ರತೀ ಹಂತದಲ್ಲೂ ಅವಕಾಶವಿರುವುದರಿಂದ ಮತ್ತು ನೇರ ವರ್ಗಾವಣೆ ವ್ಯವಸ್ಥೆ ಇರುವುದರಿಂದ ನಾಗರಿಕರಿಗೆ ಯಶಸ್ವಿಯಾಗಿ ತಲುಪುತ್ತಿವೆ ಎಂದು ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ಸಂಸ್ಥೆಯ ಬಸ್ಗಳ ಸೌಲಭ್ಯ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿದ್ದು, ಇನ್ನೂ ಈ ಸೌಲಭ್ಯ ತಲುಪದಿರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಗ್ಯಾರಂಟಿ ಯೋಜನೆಗಳ ಯಶೋಗಾಥೆಗಳನ್ನು ಸಂಕಲಿಸಲಾಗುತ್ತಿದ್ದು, ಸಂಬಂಧಿಸಿದ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸಮಿತಿಯ ಸದಸ್ಯೆ ರೇಖಾ ಸುವರ್ಣ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಸೌಲಭ್ಯದಿಂದ ವಂಚಿತವಾಗಿರುವ ಫಲಾನುಭವಿಗಳಿಗೆ ಇಲಾಖಾ ಹಂತದಲ್ಲಿ ಶೀಘ್ರವಾಗಿ ಸ್ಪಂದಿಸುವುದರೊಂದಿಗೆ ವೈಯಕ್ತಿಕ ಆದ್ಯತೆ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉತ್ತರಿಸಿ, ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ನೀಡುವುದರೊಂದಿಗೆ ತಂತ್ರಾಂಶದ ಮೂಲಕ ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಮಿತಿ ಸದಸ್ಯ ರಮೇಶ ತಿಂಗಳಾಯ ಮಾತನಾಡಿ, ಹೂಡೆ ಭಾಗಕ್ಕೆ ನಿರಂತರ ಅಗ್ರಹದ ಕಾರಣ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯವನ್ನು ಒದಗಿಸಲಾಗಿದ್ದರೂ ಆ ಭಾಗದ ನಾಗರಿಕರಿಗೆ ಸಂಜೆಯ ಅವಧಿಯಲ್ಲಿ ಅನುಕೂಲವಾಗುವ ಸಮಯ ನಿಗದಿಯಾಗದಿರುವ ಕಾರಣ ಮತ್ತೊಮ್ಮೆ ಈ ಕುರಿತು ಆಗ್ರಹಿಸುವ ಸಂದರ್ಭ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ದ್ವನಿಗೂಡಿಸಿದ ಸದಸ್ಯ ಶ್ರೀಕಾಂತ ಆಚಾರ್ಯ, ಸಾರಿಗೆ ಸಂಸ್ಥೆಯ ಸ್ಥಳೀಯ ಬಸ್ಗಳು ಈ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಸರ್ವಿಸ್ ರಸ್ತೆಯಲ್ಲಿ ಚಲಿಸುವಂತೆ ಮತ್ತು ನಿಗದಿತ ಸಮಯದಲ್ಲಿ ನಿಯಮಿತ ನಿಲ್ದಾಣಗಳಿಗೆ ಕಡ್ಡಾಯವಾಗಿ ತಲುಪುವಂತೆ ಕ್ರಮ ವಹಿಸಲು ಹಲವು ಸಭೆಗಳಲ್ಲಿ ಮನವಿ ಮಾಡಿದ್ದರೂ ಇನ್ನೂ ಸುಧಾರಣೆ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಹಂತದ ಸಭೆಗಳಲ್ಲಿ ತಾವು ಈಗಾಗಲೇ ಈ ಕುರಿತು ಪ್ರಸ್ತಾಪಿಸಿದ್ದು, ಆದ್ಯತೆ ನೀಡಿ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷರು ತಿಳಿಸಿದರು.</p>.<p>ಯುವನಿಧಿ ಯೋಜನೆ ಅನುಷ್ಠಾನ ಸಂಬಂಧ ತಾಲ್ಲೂಕು ಹಂತದಲ್ಲಿ ಫಲಾನುಭವಿಗಳ ನೋಂದಣಿಯ ಪ್ರಮಾಣ ಕಡಿಮೆಯಿದ್ದು, ಸಂಬಂಧಿಸಿದ ಇಲಾಖೆಯ ಮೂಲಕ ಕಾಲೇಜುಗಳಲ್ಲಿ ಈ ಕುರಿತು ಮಾಹಿತಿ ಕಾರ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಹಮ್ಮಿಕೊಳ್ಳುವುದು ಅಗತ್ಯ ಎಂದು ಸಮಿತಿಯ ಸದಸ್ಯರು ಆಗ್ರಹಿಸಿದರು.</p>.<p>ಗ್ಯಾರಂಟಿ ಸಮಿತಿಯ ಸದಸ್ಯರಾದ ಗೋಪಿನಾಯ್ಕ, ರಾಮಕೃಷ್ಣ, ಸುರೇಶ ಪೂಜಾರಿ, ದಿವಾಕರ ಗಾಣಿಗ, ಶ್ರೀನಿವಾಸ ವಡ್ದರ್ಸೆ ಮತ್ತಿತರರು ಮಾತನಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ, ಆಹಾರ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಸಾರಿಗೆ ಇಲಾಖೆಗಳ ಅಧಿಕಾರಿಗಳು ಮಾಸಿಕ ಪ್ರಗತಿಯ ವಿವರ ಮಂಡಿಸಿದರು.</p>.<p>ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಇಒ ಎಚ್.ವಿ ಇಬ್ರಾಹಿಂಪುರ, ಸಹಾಯಕ ಲೆಕ್ಕಾಧಿಕಾರಿ ಮೆಲ್ವಿನ್ ಬಾಂಜಿ, ಸಹಾಯಕ ನಿರ್ದೇಶಕ ಮಹೇಶ ಕೆ., ಸುಧಾಕರ ಶೆಟ್ಟಿ, ಯೋಜನಾಧಿಕಾರಿ ಸಂದೇಶ ಶೆಟ್ಟಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>