ಹೈನುಗಾರಿಕೆಗೆ ಅಗತ್ಯವಾಗಿರುವ ಮೇವು, ಪಶು, ಆಹಾರ ಮುಂತಾದ ಅಗತ್ಯ ವಸ್ತುಗಳ ದರವು ದಿನದಿಂದ ದಿನಕ್ಕೆ ಏರುತ್ತಿದೆ. ಮಾರುಕಟ್ಟೆ ಬೆಲೆಗಿಂತ ನಿರ್ವಹಣಾ ವೆಚ್ಚವೇ ಅಧಿಕವಾಗುತ್ತಿರುವುದರಿಂದ ಹೈನುಗಾರಿಕೆಯೇ ಬೇಡ ಎಂದು ರೈತಾಪಿ ವರ್ಗ ಈ ಕ್ಷೇತ್ರದಿಂದ ದೂರಾಗುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ರೈತರಿಗೆ ಬೆಂಬಲವಾಗಿ ನಿಲ್ಲಬೇಕಾದ ಸರ್ಕಾರ, ತೆರಿಗೆ ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿರುವುದು ಖಂಡನೀಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.