<p><strong>ಉಡುಪಿ:</strong> ಜಿಎಸ್ಟಿ ಆದಾಯದಿಂದ ದೇಶದ ಜಿಡಿಪಿ ಏರಿಕೆಯಾಗುವುದರ ಜೊತೆಗೆ ವಿದೇಶಿ ಹೂಡಿಕೆದಾರರು ನಮ್ಮ ದೇಶದಲ್ಲಿ ಹೂಡಿಕೆ ಮಾಡುವುದರಿಂದ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕವು ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ ಅಜ್ಜರಕಾಡಿನ ಡಯಾನ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಇಂದು ರಾಜಕೀಯ ಉದ್ದೇಶದಿಂದ ಜಿಎಸ್ಟಿ ಅನ್ನು ತೆಗಳುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಕಾರ್ಯಕರ್ತರು ಜಿಎಸ್ಟಿ ಇಳಿಕೆಯಿಂದಾಗುವ ಪ್ರಯೋಜನಗಳ ಕುರಿತು ಜನರಿಗೆ ಮನವರಿಕೆ ಮಾಡಬೇಕಾಗಿದೆ ಎಂದರು.</p>.<p>ದೇಶದಲ್ಲಿ ಜಿಎಸ್ಟಿ ತೆರಿಗೆ ಪದ್ಧತಿ ಜಾರಿಗೆ ಬರುವ ಮೂಲಕ ಹರಿದು ಹಂಚಿ ಹೋಗಿದ್ದ ತೆರಿಗೆಗಳು ಏಕರೂಪಕ್ಕೆ ಬಂದಿದ್ದವು, ಇದೀಗ ಜಿಎಸ್ಟಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನಿಟ್ಟಿದೆ ಎಂದು ಅವರು ಹೇಳಿದರು.</p>.<p>ಜಿಎಸ್ಟಿ ಇಳಿಕೆಯಿಂದಾಗಿ ಕೇಂದ್ರ ಸರ್ಕಾರಕ್ಕೆ ₹48 ಸಾವಿರ ಕೋಟಿ ನಷ್ಟವಾದರೂ ಸರ್ಕಾರ ಜನರ ಹಿತ ದೃಷ್ಟಿಯಿಂದ ಇಂತಹ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.</p>.<p>ಜಿಎಸ್ಟಿ ಇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ₹15 ಸಾವಿರ ಕೋಟಿ ನಷ್ಟ ಉಂಟಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದು ಸುಳ್ಳು, ಜವಾಬ್ದಾರಿತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಿದರೆ ಜನರು ನಂಬುತ್ತಾರೆ. ನೈಜ ವಿಚಾರವನ್ನು ನಾವು ಜನರಿಗೆ ತಿಳಿಸಬೇಕಾಗಿದೆ ಎಂದರು.</p>.<p>ಬೆಂಗಳೂರಿನ ಅರ್ಥಶಾಸ್ತ್ರಜ್ಞ ವಿಶ್ವನಾಥ ಭಟ್ ಮಾತನಾಡಿ, ಕೇಂದ್ರ ಸರ್ಕಾರವು ಶೇ 99ರಷ್ಟು ಸರಕುಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಮಾಡಿದೆ. ಸ್ವಾತಂತ್ರ್ಯಾ ನಂತರ ದೇಶ ಕಂಡ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ ಎಂದು ಹೇಳಿದರು.</p>.<p>ಜಿಎಸ್ಟಿ ಇಳಿಕೆಯಿಂದಾಗಿ ವಿವಿಧ ವಸ್ತುಗಳ ದರ ಕಡಿಮೆಯಾಗಲಿದೆ. ಇದು ಜನರಿಗೆ ಹಣ ಉಳಿತಾಯ ಮಾಡಲು ಸಹಾಯಕವಾಗಲಿದೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಅಮೀನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ ಶೆಟ್ಟಿ ಇದ್ದರು. ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಎಸ್ಟಿ ಆದಾಯದಿಂದ ದೇಶದ ಜಿಡಿಪಿ ಏರಿಕೆಯಾಗುವುದರ ಜೊತೆಗೆ ವಿದೇಶಿ ಹೂಡಿಕೆದಾರರು ನಮ್ಮ ದೇಶದಲ್ಲಿ ಹೂಡಿಕೆ ಮಾಡುವುದರಿಂದ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕವು ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ ಅಜ್ಜರಕಾಡಿನ ಡಯಾನ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಇಂದು ರಾಜಕೀಯ ಉದ್ದೇಶದಿಂದ ಜಿಎಸ್ಟಿ ಅನ್ನು ತೆಗಳುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಕಾರ್ಯಕರ್ತರು ಜಿಎಸ್ಟಿ ಇಳಿಕೆಯಿಂದಾಗುವ ಪ್ರಯೋಜನಗಳ ಕುರಿತು ಜನರಿಗೆ ಮನವರಿಕೆ ಮಾಡಬೇಕಾಗಿದೆ ಎಂದರು.</p>.<p>ದೇಶದಲ್ಲಿ ಜಿಎಸ್ಟಿ ತೆರಿಗೆ ಪದ್ಧತಿ ಜಾರಿಗೆ ಬರುವ ಮೂಲಕ ಹರಿದು ಹಂಚಿ ಹೋಗಿದ್ದ ತೆರಿಗೆಗಳು ಏಕರೂಪಕ್ಕೆ ಬಂದಿದ್ದವು, ಇದೀಗ ಜಿಎಸ್ಟಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನಿಟ್ಟಿದೆ ಎಂದು ಅವರು ಹೇಳಿದರು.</p>.<p>ಜಿಎಸ್ಟಿ ಇಳಿಕೆಯಿಂದಾಗಿ ಕೇಂದ್ರ ಸರ್ಕಾರಕ್ಕೆ ₹48 ಸಾವಿರ ಕೋಟಿ ನಷ್ಟವಾದರೂ ಸರ್ಕಾರ ಜನರ ಹಿತ ದೃಷ್ಟಿಯಿಂದ ಇಂತಹ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.</p>.<p>ಜಿಎಸ್ಟಿ ಇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ₹15 ಸಾವಿರ ಕೋಟಿ ನಷ್ಟ ಉಂಟಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದು ಸುಳ್ಳು, ಜವಾಬ್ದಾರಿತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಿದರೆ ಜನರು ನಂಬುತ್ತಾರೆ. ನೈಜ ವಿಚಾರವನ್ನು ನಾವು ಜನರಿಗೆ ತಿಳಿಸಬೇಕಾಗಿದೆ ಎಂದರು.</p>.<p>ಬೆಂಗಳೂರಿನ ಅರ್ಥಶಾಸ್ತ್ರಜ್ಞ ವಿಶ್ವನಾಥ ಭಟ್ ಮಾತನಾಡಿ, ಕೇಂದ್ರ ಸರ್ಕಾರವು ಶೇ 99ರಷ್ಟು ಸರಕುಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಮಾಡಿದೆ. ಸ್ವಾತಂತ್ರ್ಯಾ ನಂತರ ದೇಶ ಕಂಡ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ ಎಂದು ಹೇಳಿದರು.</p>.<p>ಜಿಎಸ್ಟಿ ಇಳಿಕೆಯಿಂದಾಗಿ ವಿವಿಧ ವಸ್ತುಗಳ ದರ ಕಡಿಮೆಯಾಗಲಿದೆ. ಇದು ಜನರಿಗೆ ಹಣ ಉಳಿತಾಯ ಮಾಡಲು ಸಹಾಯಕವಾಗಲಿದೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಅಮೀನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ ಶೆಟ್ಟಿ ಇದ್ದರು. ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>