ಬ್ರಾಹ್ಮಣಿಕೆಯ ಮೂಲಕ ಮಾನವೀಯತೆ ಮೆರೆದರೆ ಉತ್ತಮ ಬ್ರಾಹ್ಮಣರಾಗಲು ಸಾಧ್ಯ. ನಾವು ಮನುಷ್ಯರು, ಪ್ರಾಣಿಗಳಿಗಿಂತ ಭಿನ್ನರು ಎಂಬುವುದನ್ನು ಅರ್ಥಮಾಡಿಕೊಳ್ಳಬೇಕು. ಬ್ರಾಹ್ಮಣರು ಕೀಳರಿಮೆಯಿಂದ ಹೊರಬಂದು ತನ್ನಲ್ಲಿರುವ ಅಗಾಧ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇನ್ನೊಬ್ಬರನ್ನು ಕ್ಷುಲಕವಾಗಿ ನೋಡದೆ, ಇಚ್ಛಾಶಕ್ತಿ, ಸಾಧಿಸುವ ಛಲ ಹಾಗೂ ಭಗವಂತನ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಬದ್ಧತೆ, ಶ್ರಮ, ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.