<p><strong>ಉಡುಪಿ: </strong>ಉಡುಪಿ ತಾಲ್ಲೂಕಿನಾದ್ಯಂತ ಕೇದಾರೋತ್ಥಾನ ಟ್ರಸ್ಟ್ನಿಂದ ‘ಹಡಿಲು ಭೂಮಿ ಕೃಷಿ ಆಂದೋಲನ’ ನಡೆಯುತ್ತಿದ್ದು, ಕಕ್ಕುಂಜೆ ವ್ಯಾಪ್ತಿಯಲ್ಲಿ 60 ಎಕರೆಯಲ್ಲಿ ಸಾವಯವ ಪದ್ದತಿಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.</p>.<p>ಭಾನುವಾರ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಕಕ್ಕುಂಜೆ ಬೈಲಿನಲ್ಲಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಶನಿವಾರ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ನ ಸದಸ್ಯರು ನಾಟಿ ಪೂರ್ವಭಾವಿ ತಯಾರಿ ವೀಕ್ಷಿಸಿದರು.</p>.<p>ಮಹಿಳೆಯರು ನೇಜಿಯನ್ನು ಕಿತ್ತು ನಾಟಿಗೆ ಸಿದ್ಧಮಾಡಿಕೊಂಡರೆ, ಯಂತ್ರಗಳ ಸಹಾಯದಿಂದ ಭೂಮಿಯನ್ನು ಹಸನು ಮಾಡಿಕೊಳ್ಳುವ ಕಾರ್ಯ ನಡೆಯಿತು. ಊರಿನ ಹಿರಿಯರು, ಭೂಮಿಯ ಮಾಲೀಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.</p>.<p>ಸ್ಥಳೀಯ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸ್ಥಳೀಯರಾದ ಕಿರಣ್, ಉಮೇಶ್, ಸಂತೋಷ್, ಸುನೀಲ್, ರುಡಾಲ್ಫ್ ಇದ್ದರು.</p>.<p><strong>ಕೈಪಿಡಿ ಬಿಡುಗಡೆ: </strong>‘ಪ್ಲಾಸ್ಟಿಕ್ ರಹಿತ ದಿನ’ದ ಅಂಗವಾಗಿ ಅಂಬಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭಿತ್ತಿಚಿತ್ರ ಹಾಗೂ ಇಲಾಖೆಯ ವಿವಿಧ ಕೈಪಿಡಿ, ಪುಸ್ತಕಗಳನ್ನು ಶಾಸಕ ರಘುಪತಿ ಭಟ್ ಬಿಡುಗಡೆ ಮಾಡಿದರು.</p>.<p>ಅಂಬಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಬಿ.ಕೆ.ಸೋಮನಾಥ್, ಉಡುಪಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮೋಹನ್ ರಾಜ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತಿ, ಅಂಬಲಪಾಡಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>.<p><strong>ಆಹಾರದ ಕಿಟ್ ವಿತರಣೆ: </strong>ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶನಿವಾರ ಕಟ್ಟಡ ಕಾರ್ಮಿಕರಿಗೆ ಶಾಸಕ ರಘುಪತಿ ಭಟ್ ಆಹಾರದ ಕಿಟ್ಗಳನ್ನು ವಿತರಿಸಿದರು.</p>.<p>ಉಡುಪಿ ತಾಲ್ಲೂಕು ಪಂಚಾಯಿತಿ ಇಒ ಮೋಹನ್ ರಾಜ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಉಡುಪಿ ತಾಲ್ಲೂಕಿನಾದ್ಯಂತ ಕೇದಾರೋತ್ಥಾನ ಟ್ರಸ್ಟ್ನಿಂದ ‘ಹಡಿಲು ಭೂಮಿ ಕೃಷಿ ಆಂದೋಲನ’ ನಡೆಯುತ್ತಿದ್ದು, ಕಕ್ಕುಂಜೆ ವ್ಯಾಪ್ತಿಯಲ್ಲಿ 60 ಎಕರೆಯಲ್ಲಿ ಸಾವಯವ ಪದ್ದತಿಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.</p>.<p>ಭಾನುವಾರ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಕಕ್ಕುಂಜೆ ಬೈಲಿನಲ್ಲಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಶನಿವಾರ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ನ ಸದಸ್ಯರು ನಾಟಿ ಪೂರ್ವಭಾವಿ ತಯಾರಿ ವೀಕ್ಷಿಸಿದರು.</p>.<p>ಮಹಿಳೆಯರು ನೇಜಿಯನ್ನು ಕಿತ್ತು ನಾಟಿಗೆ ಸಿದ್ಧಮಾಡಿಕೊಂಡರೆ, ಯಂತ್ರಗಳ ಸಹಾಯದಿಂದ ಭೂಮಿಯನ್ನು ಹಸನು ಮಾಡಿಕೊಳ್ಳುವ ಕಾರ್ಯ ನಡೆಯಿತು. ಊರಿನ ಹಿರಿಯರು, ಭೂಮಿಯ ಮಾಲೀಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.</p>.<p>ಸ್ಥಳೀಯ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸ್ಥಳೀಯರಾದ ಕಿರಣ್, ಉಮೇಶ್, ಸಂತೋಷ್, ಸುನೀಲ್, ರುಡಾಲ್ಫ್ ಇದ್ದರು.</p>.<p><strong>ಕೈಪಿಡಿ ಬಿಡುಗಡೆ: </strong>‘ಪ್ಲಾಸ್ಟಿಕ್ ರಹಿತ ದಿನ’ದ ಅಂಗವಾಗಿ ಅಂಬಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭಿತ್ತಿಚಿತ್ರ ಹಾಗೂ ಇಲಾಖೆಯ ವಿವಿಧ ಕೈಪಿಡಿ, ಪುಸ್ತಕಗಳನ್ನು ಶಾಸಕ ರಘುಪತಿ ಭಟ್ ಬಿಡುಗಡೆ ಮಾಡಿದರು.</p>.<p>ಅಂಬಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಬಿ.ಕೆ.ಸೋಮನಾಥ್, ಉಡುಪಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮೋಹನ್ ರಾಜ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತಿ, ಅಂಬಲಪಾಡಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>.<p><strong>ಆಹಾರದ ಕಿಟ್ ವಿತರಣೆ: </strong>ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶನಿವಾರ ಕಟ್ಟಡ ಕಾರ್ಮಿಕರಿಗೆ ಶಾಸಕ ರಘುಪತಿ ಭಟ್ ಆಹಾರದ ಕಿಟ್ಗಳನ್ನು ವಿತರಿಸಿದರು.</p>.<p>ಉಡುಪಿ ತಾಲ್ಲೂಕು ಪಂಚಾಯಿತಿ ಇಒ ಮೋಹನ್ ರಾಜ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>