<p>ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿರುವ ಪ್ರತಿಭಾವಂತ ಮಕ್ಕಳ ಸಂಗೀತ ಪ್ರತಿಭೆ ಅನಾವರಣಕ್ಕೆ ‘ಹಾಡು ನೀ ಹಾಡು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಮುಖ್ಯಸ್ಥೆ ಸರಿತಾ ಸಂತೋಷ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 5 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು, ಆಡಿಷನ್ನಲ್ಲಿ ಆಯ್ಕೆಯಾದವರಿಗೆ ಪ್ರಸಿದ್ಧ ಸಂಗೀತ ವಿದ್ವಾಂಸರಿಂದ ಮಾರ್ಗದರ್ಶನ ನೀಡಲಾಗುವುದು.</p>.<p>6 ತಿಂಗಳು ನಡೆಯುವ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಮಣಿಪಾಲದ ಲಯನ್ಸ್ ಕ್ಲಬ್ ಚಾರಿಟೆಬಲ್ ಫೌಂಡೇಷನ್ ನೀಡುತ್ತಿದೆ. ವಿ 4 ಸುದ್ದಿವಾಹಿನಿ ಶನಿವಾರ ಹಾಗೂ ಭಾನುವಾರ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು.</p>.<p>ಸೆ.11ರಂದು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ, ಕುಂದಾಪುರದ ಆರ್ಎನ್ ಶೆಟ್ಟಿ ಕಾಲೇಜಿನಲ್ಲಿಬೆಳಿಗ್ಗೆ 8ಕ್ಕೆ, ಸೆ.18ರಂದು ಮಂಗಳೂರಿನ ಕೋಡಿಯಾಲ್ಬೈಲ್ ಶಾರದಾ ವಿದ್ಯಾಲಯದಲ್ಲಿ, ಮೂಡಬಿದ್ರೆಯ ಆಳ್ವಾಸ್ ಕ್ಯಾಂಪಸ್, ಪುತ್ತೂರಿನಲ್ಲಿ ಸೇಂಟ್ ವಿಕ್ಟರ್ಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8ಕ್ಕೆ ಆಡಿಷನ್ ನಡೆಯಲಿದೆ.</p>.<p>ಭಾವಗೀತೆ, ಜಾನಪದ ಗೀತೆ, ಸಿನಿಮಾ ಹಾಡು ಹಾಗೂ ಇತರ ಕನ್ನಡ ಹಾಡುಗಳನ್ನು ಹಾಡಬಹುದು. ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನದ ಜತೆಗೆ ಆಕರ್ಷಕ ಉಡುಗೊರೆ ಹಾಗೂ ಹೆಸರಾಂತ ಗಾಯಕರು, ನಟ ನಟಿಯರನ್ನು ಭೇಟಿ ಆಡುವ ಅವಕಾಶ ಸಿಗಲಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸುರೇಶ್ ಪ್ರಭು, ಕೃಪಾ ಪ್ರಸಿದ್ಧ್, ಜಯಂತ್, ಗೌತಮ್, ಸುಹಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿರುವ ಪ್ರತಿಭಾವಂತ ಮಕ್ಕಳ ಸಂಗೀತ ಪ್ರತಿಭೆ ಅನಾವರಣಕ್ಕೆ ‘ಹಾಡು ನೀ ಹಾಡು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಮುಖ್ಯಸ್ಥೆ ಸರಿತಾ ಸಂತೋಷ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 5 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು, ಆಡಿಷನ್ನಲ್ಲಿ ಆಯ್ಕೆಯಾದವರಿಗೆ ಪ್ರಸಿದ್ಧ ಸಂಗೀತ ವಿದ್ವಾಂಸರಿಂದ ಮಾರ್ಗದರ್ಶನ ನೀಡಲಾಗುವುದು.</p>.<p>6 ತಿಂಗಳು ನಡೆಯುವ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಮಣಿಪಾಲದ ಲಯನ್ಸ್ ಕ್ಲಬ್ ಚಾರಿಟೆಬಲ್ ಫೌಂಡೇಷನ್ ನೀಡುತ್ತಿದೆ. ವಿ 4 ಸುದ್ದಿವಾಹಿನಿ ಶನಿವಾರ ಹಾಗೂ ಭಾನುವಾರ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು.</p>.<p>ಸೆ.11ರಂದು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ, ಕುಂದಾಪುರದ ಆರ್ಎನ್ ಶೆಟ್ಟಿ ಕಾಲೇಜಿನಲ್ಲಿಬೆಳಿಗ್ಗೆ 8ಕ್ಕೆ, ಸೆ.18ರಂದು ಮಂಗಳೂರಿನ ಕೋಡಿಯಾಲ್ಬೈಲ್ ಶಾರದಾ ವಿದ್ಯಾಲಯದಲ್ಲಿ, ಮೂಡಬಿದ್ರೆಯ ಆಳ್ವಾಸ್ ಕ್ಯಾಂಪಸ್, ಪುತ್ತೂರಿನಲ್ಲಿ ಸೇಂಟ್ ವಿಕ್ಟರ್ಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8ಕ್ಕೆ ಆಡಿಷನ್ ನಡೆಯಲಿದೆ.</p>.<p>ಭಾವಗೀತೆ, ಜಾನಪದ ಗೀತೆ, ಸಿನಿಮಾ ಹಾಡು ಹಾಗೂ ಇತರ ಕನ್ನಡ ಹಾಡುಗಳನ್ನು ಹಾಡಬಹುದು. ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನದ ಜತೆಗೆ ಆಕರ್ಷಕ ಉಡುಗೊರೆ ಹಾಗೂ ಹೆಸರಾಂತ ಗಾಯಕರು, ನಟ ನಟಿಯರನ್ನು ಭೇಟಿ ಆಡುವ ಅವಕಾಶ ಸಿಗಲಿದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸುರೇಶ್ ಪ್ರಭು, ಕೃಪಾ ಪ್ರಸಿದ್ಧ್, ಜಯಂತ್, ಗೌತಮ್, ಸುಹಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>