ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲಾಡಿಗೆ ಸಚಿವ ಸ್ಥಾನ ಕೊಡಿ: ಸುಶಾಂತ್ ಅಚ್ಲಾಡಿ ಒತ್ತಾಯ

Last Updated 30 ಜುಲೈ 2021, 15:58 IST
ಅಕ್ಷರ ಗಾತ್ರ

ಉಡುಪಿ: ಹಿರಿಯ ಹಾಗೂ ಪ್ರಾಮಾಣಿಕ ರಾಜಕಾರಣಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅಭಿಮಾನಿ ಸುಶಾಂತ್ ಅಚ್ಲಾಡಿ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1999ರಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ್ದಾರೆ. ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಹಗರಣಗಳಲ್ಲಿ ಭಾಗಿಯಾಗಿಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಜನಸೇವೆ ಮಾಡುತ್ತಿದ್ದಾರೆ ಎಂದರು.

ಪ್ರತೀ ವಿಧಾನಸಭಾ ಚುನಾವಣೆಯಲ್ಲೂ ಕುಂದಾಪುರ ಕ್ಷೇತ್ರದಲ್ಲಿ ಗರಿಷ್ಠ ಮತಗಳ ಅಂತರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಗೆಲ್ಲುತ್ತಾ ಬಂದಿದ್ದಾರೆ. ಹಿಂದೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಮಾನಿಸಿದ ಬಿಜೆಪಿ ಈಗ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಮುಂದಿನ ಚುನಾವಣೆಯಲ್ಲಿ ಹಾಲಾಡಿ ಸ್ಪರ್ಧೆ ಮಾಡುವುದು ಖಾತ್ರಿ ಇಲ್ಲವಾಗಿದ್ದು, ಅವರು ಒಮ್ಮೆಯಾದರೂ ಸಚಿವರಾಗಬೇಕು ಎಂಬುದು ಅಭಿಮಾನಿಗಳ ಆಸೆ. ಸಚಿವ ಸ್ಥಾನಕ್ಕೆ ಆಗ್ರಹಿಸಿ ಈಗಾಗಲೇ ಜಾಲತಾಣಗಳಲ್ಲಿ ಅಭಿಯಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳಾದ ಯೋಗೀಶ್‌, ತೀರ್ಥನ್ ದೇವಾಡಿಗ ವಡ್ಡರ್ಸೆ, ಕೀರ್ತೀಶ್ ಪೂಜಾರಿ ಕೋಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT