<p><strong>ಉಡುಪಿ:</strong> ಹಿರಿಯ ಹಾಗೂ ಪ್ರಾಮಾಣಿಕ ರಾಜಕಾರಣಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅಭಿಮಾನಿ ಸುಶಾಂತ್ ಅಚ್ಲಾಡಿ ಒತ್ತಾಯಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1999ರಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ್ದಾರೆ. ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಹಗರಣಗಳಲ್ಲಿ ಭಾಗಿಯಾಗಿಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಜನಸೇವೆ ಮಾಡುತ್ತಿದ್ದಾರೆ ಎಂದರು.</p>.<p>ಪ್ರತೀ ವಿಧಾನಸಭಾ ಚುನಾವಣೆಯಲ್ಲೂ ಕುಂದಾಪುರ ಕ್ಷೇತ್ರದಲ್ಲಿ ಗರಿಷ್ಠ ಮತಗಳ ಅಂತರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಗೆಲ್ಲುತ್ತಾ ಬಂದಿದ್ದಾರೆ. ಹಿಂದೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಮಾನಿಸಿದ ಬಿಜೆಪಿ ಈಗ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಮುಂದಿನ ಚುನಾವಣೆಯಲ್ಲಿ ಹಾಲಾಡಿ ಸ್ಪರ್ಧೆ ಮಾಡುವುದು ಖಾತ್ರಿ ಇಲ್ಲವಾಗಿದ್ದು, ಅವರು ಒಮ್ಮೆಯಾದರೂ ಸಚಿವರಾಗಬೇಕು ಎಂಬುದು ಅಭಿಮಾನಿಗಳ ಆಸೆ. ಸಚಿವ ಸ್ಥಾನಕ್ಕೆ ಆಗ್ರಹಿಸಿ ಈಗಾಗಲೇ ಜಾಲತಾಣಗಳಲ್ಲಿ ಅಭಿಯಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳಾದ ಯೋಗೀಶ್, ತೀರ್ಥನ್ ದೇವಾಡಿಗ ವಡ್ಡರ್ಸೆ, ಕೀರ್ತೀಶ್ ಪೂಜಾರಿ ಕೋಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಹಿರಿಯ ಹಾಗೂ ಪ್ರಾಮಾಣಿಕ ರಾಜಕಾರಣಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅಭಿಮಾನಿ ಸುಶಾಂತ್ ಅಚ್ಲಾಡಿ ಒತ್ತಾಯಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1999ರಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ್ದಾರೆ. ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಹಗರಣಗಳಲ್ಲಿ ಭಾಗಿಯಾಗಿಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಜನಸೇವೆ ಮಾಡುತ್ತಿದ್ದಾರೆ ಎಂದರು.</p>.<p>ಪ್ರತೀ ವಿಧಾನಸಭಾ ಚುನಾವಣೆಯಲ್ಲೂ ಕುಂದಾಪುರ ಕ್ಷೇತ್ರದಲ್ಲಿ ಗರಿಷ್ಠ ಮತಗಳ ಅಂತರದಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಗೆಲ್ಲುತ್ತಾ ಬಂದಿದ್ದಾರೆ. ಹಿಂದೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಮಾನಿಸಿದ ಬಿಜೆಪಿ ಈಗ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಮುಂದಿನ ಚುನಾವಣೆಯಲ್ಲಿ ಹಾಲಾಡಿ ಸ್ಪರ್ಧೆ ಮಾಡುವುದು ಖಾತ್ರಿ ಇಲ್ಲವಾಗಿದ್ದು, ಅವರು ಒಮ್ಮೆಯಾದರೂ ಸಚಿವರಾಗಬೇಕು ಎಂಬುದು ಅಭಿಮಾನಿಗಳ ಆಸೆ. ಸಚಿವ ಸ್ಥಾನಕ್ಕೆ ಆಗ್ರಹಿಸಿ ಈಗಾಗಲೇ ಜಾಲತಾಣಗಳಲ್ಲಿ ಅಭಿಯಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳಾದ ಯೋಗೀಶ್, ತೀರ್ಥನ್ ದೇವಾಡಿಗ ವಡ್ಡರ್ಸೆ, ಕೀರ್ತೀಶ್ ಪೂಜಾರಿ ಕೋಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>